ಟೀಸಿಗಾಗಿ ತಾಳಿ ಮಾರಲು ಸಿದ್ದವಾಗಿದ್ದ ತಾಯಿಗೆ BIG 3 ನೆರವು, ಮಗನಿಗೆ ಬೇರೆ ಶಾಲೆಯಲ್ಲಿ ಅಡ್ಮಿಶನ್..!

ಟೀಸಿಗಾಗಿ ತಾಳಿ ಮಾರಲು ಸಿದ್ದವಾಗಿದ್ದ ತಾಯಿಗೆ BIG 3 ನೆರವು, ಮಗನಿಗೆ ಬೇರೆ ಶಾಲೆಯಲ್ಲಿ ಅಡ್ಮಿಶನ್..!

Published : Jun 06, 2022, 02:46 PM IST

ಶಾಲಾ ಟೀಸಿ ಕೊಡುವ ವಿಚಾರವಾಗಿ ಕಳೆದ ಎರಡು ವರ್ಷಗಳಿಂದ ಶಾಲಾ ಆಡಳಿತ ಮಂಡಳಿ ಸತಾಯಿಸುತ್ತಾ ಬಂದಿದ್ದು, ಬೇಸತ್ತ ವಿದ್ಯಾರ್ಥಿ ತಾಯಿ (Mother )ತನ್ನ ಮಾಂಗಲ್ಯ ಸರ (Mangalsutra ) ಮಾರಿ, ವಿದ್ಯಾರ್ಥಿಯ ಫೀ ಕಟ್ಟಲು ಸಿದ್ದವಾಗಿದ್ದಳು.‌ ಇಂತ ಮನಕಲಕುವ ಘಟನೆ ಕೊಪ್ಪಳದ ಕನಕಗಿರಿಯಲ್ಲಿ ನಡೆದಿದೆ. 

ಕೊಪ್ಪಳ (ಜೂ. 06):  ಶಾಲಾ ಟೀಸಿ ಕೊಡುವ ವಿಚಾರವಾಗಿ ಕಳೆದ ಎರಡು ವರ್ಷಗಳಿಂದ ಶಾಲಾ ಆಡಳಿತ ಮಂಡಳಿ ಸತಾಯಿಸುತ್ತಾ ಬಂದಿದ್ದು, ಬೇಸತ್ತ ವಿದ್ಯಾರ್ಥಿ ತಾಯಿ (Mother )ತನ್ನ ಮಾಂಗಲ್ಯ ಸರ (Mangalsutra ) ಮಾರಿ, ವಿದ್ಯಾರ್ಥಿಯ ಫೀ ಕಟ್ಟಲು ಸಿದ್ದವಾಗಿದ್ದಳು.‌  ಇಂತ ಮನಕಲಕುವ ಘಟನೆ ಕೊಪ್ಪಳದ ಕನಕಗಿರಿಯಲ್ಲಿ ನಡೆದಿದೆ. 

ಕೊಪ್ಪಳ (Koppala) ಜಿಲ್ಲೆಯ ಕನಕಗಿರಿ ಪಟ್ಟಣದ ಮಾರುತಿರಾವ್ ಹಾಗೂ ರುಕ್ಮೀಣಿ ಎನ್ನುವರ ಮಗ ದರ್ಶನ್ ಗಂಗಾವತಿ ತಾಲೂಕಿನ ಕೆಸರಟ್ಟಿಯ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 2019 ರಲ್ಲಿ 5 ನೇ ತರಗತಿಗೆ ಅಡ್ಮಿಶನ್ ಮಾಡಿಸಿದ್ದಾರೆ. ಆ ವೇಳೆಯಲ್ಲಿ ದರ್ಶನ್ ತಾಯಿ ರುಕ್ಮಿಣಿ 20  ಸಾವಿರ ಫೀಸ್ ತುಂಬಿದ್ದಾರೆ. ಬಳಿಕ ಶಾಲೆಯ ಫೀ ಕಟ್ಟಲು ಸಾಧ್ಯವಾಗದ ಹಿನ್ನಲೆಯಲ್ಲಿ 2020-21ನೇ ಸಾಲಿನಲ್ಲಿ ದರ್ಶನ್ ತಾಯಿ ರುಕ್ಮಿಣಿ ಮಗನ ಟಿಸಿ ನೀಡಲು ಶಾಲೆಯವರನ್ನು ಕೇಳಿದ್ದಾರೆ. ಆಗ ಶಾಲೆಯವರು ಒಂದು ವರ್ಷದ 20 ಸಾವಿರ ಫೀ ಕಟ್ಟಿ, ಟಿಸಿ ತೆಗೆದುಕೊಂಡು ಹೋಗಲು ಹೇಳಿದ್ದಾರೆ.

ಆಗ ರುಕ್ಮಿಣಿ ನನ್ನ ಬಳಿ ಅಷ್ಟೊಂದು ಹಣ ಇಲ್ಲವೆಂದು ಹೇಳಿದ್ದಾಳೆ. ಜೊತೆಗೆ ಕೊವೀಡ್ ಸಹ ಹೆಚ್ಚಳವಾದ ಹಿನ್ನಲೆಯಲ್ಲಿ ಶಾಲೆಗೆ ಹೋಗಲೇ ಇಲ್ಲ.‌ಬಳಿಕ 2021-22 ನೇ ಸಾಲಿನಲ್ಲಿಯೂ ಟಿಸಿ ಕೇಳಲು ಹೋದಾಗ ಶಾಲೆಯವರು 2 ವರ್ಷದ 40 ಸಾವಿರ ಫೀ ಕಟ್ಟಲು ಹೇಳಿದ್ದಾರೆ. ಇದರಿಂದ ಕಂಗಾಲಾದ ದರ್ಶನ್ ತಾಯಿ ಸೀದಾ ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್ 3 ಕಾರ್ಯಕ್ರಮ ನಡೆಸಿಕೊಡುವ ಜಯಪ್ರಕಾಶ್ ಶೆಟ್ಟಿ ಅವರಿಗೆ ಕರೆ ಮಾಡಿ ತನ್ನ ಸಮಸ್ಯೆ ಹೇಳಿಕೊಂಡೊದ್ದಾಳೆ. ಇದನ್ನ ಬಿಗ್ 3 ಪ್ರಸಾರ ಮಾಡಿ, ಆ ತಾಯಿಗೆ ನ್ಯಾಯ ಒದಗಿಸಿದೆ. ಬಿಗ್ 3 ವರದಿ ಬಳಿಕ ಶಾಲೆಯಿಂದ ಟಿಸಿ ಕೊಡಲಾಯಿತು, ಬೇರೆ ಶಾಲೆಗೆ ಅಡ್ಮಿಶನ್ ಕೂಡಾ ಆಗಿದೆ. 

 


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!