ಟೀಸಿಗಾಗಿ ತಾಳಿ ಮಾರಲು ಸಿದ್ದವಾಗಿದ್ದ ತಾಯಿಗೆ BIG 3 ನೆರವು, ಮಗನಿಗೆ ಬೇರೆ ಶಾಲೆಯಲ್ಲಿ ಅಡ್ಮಿಶನ್..!

ಟೀಸಿಗಾಗಿ ತಾಳಿ ಮಾರಲು ಸಿದ್ದವಾಗಿದ್ದ ತಾಯಿಗೆ BIG 3 ನೆರವು, ಮಗನಿಗೆ ಬೇರೆ ಶಾಲೆಯಲ್ಲಿ ಅಡ್ಮಿಶನ್..!

Published : Jun 06, 2022, 02:46 PM IST

ಶಾಲಾ ಟೀಸಿ ಕೊಡುವ ವಿಚಾರವಾಗಿ ಕಳೆದ ಎರಡು ವರ್ಷಗಳಿಂದ ಶಾಲಾ ಆಡಳಿತ ಮಂಡಳಿ ಸತಾಯಿಸುತ್ತಾ ಬಂದಿದ್ದು, ಬೇಸತ್ತ ವಿದ್ಯಾರ್ಥಿ ತಾಯಿ (Mother )ತನ್ನ ಮಾಂಗಲ್ಯ ಸರ (Mangalsutra ) ಮಾರಿ, ವಿದ್ಯಾರ್ಥಿಯ ಫೀ ಕಟ್ಟಲು ಸಿದ್ದವಾಗಿದ್ದಳು.‌ ಇಂತ ಮನಕಲಕುವ ಘಟನೆ ಕೊಪ್ಪಳದ ಕನಕಗಿರಿಯಲ್ಲಿ ನಡೆದಿದೆ. 

ಕೊಪ್ಪಳ (ಜೂ. 06):  ಶಾಲಾ ಟೀಸಿ ಕೊಡುವ ವಿಚಾರವಾಗಿ ಕಳೆದ ಎರಡು ವರ್ಷಗಳಿಂದ ಶಾಲಾ ಆಡಳಿತ ಮಂಡಳಿ ಸತಾಯಿಸುತ್ತಾ ಬಂದಿದ್ದು, ಬೇಸತ್ತ ವಿದ್ಯಾರ್ಥಿ ತಾಯಿ (Mother )ತನ್ನ ಮಾಂಗಲ್ಯ ಸರ (Mangalsutra ) ಮಾರಿ, ವಿದ್ಯಾರ್ಥಿಯ ಫೀ ಕಟ್ಟಲು ಸಿದ್ದವಾಗಿದ್ದಳು.‌  ಇಂತ ಮನಕಲಕುವ ಘಟನೆ ಕೊಪ್ಪಳದ ಕನಕಗಿರಿಯಲ್ಲಿ ನಡೆದಿದೆ. 

ಕೊಪ್ಪಳ (Koppala) ಜಿಲ್ಲೆಯ ಕನಕಗಿರಿ ಪಟ್ಟಣದ ಮಾರುತಿರಾವ್ ಹಾಗೂ ರುಕ್ಮೀಣಿ ಎನ್ನುವರ ಮಗ ದರ್ಶನ್ ಗಂಗಾವತಿ ತಾಲೂಕಿನ ಕೆಸರಟ್ಟಿಯ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 2019 ರಲ್ಲಿ 5 ನೇ ತರಗತಿಗೆ ಅಡ್ಮಿಶನ್ ಮಾಡಿಸಿದ್ದಾರೆ. ಆ ವೇಳೆಯಲ್ಲಿ ದರ್ಶನ್ ತಾಯಿ ರುಕ್ಮಿಣಿ 20  ಸಾವಿರ ಫೀಸ್ ತುಂಬಿದ್ದಾರೆ. ಬಳಿಕ ಶಾಲೆಯ ಫೀ ಕಟ್ಟಲು ಸಾಧ್ಯವಾಗದ ಹಿನ್ನಲೆಯಲ್ಲಿ 2020-21ನೇ ಸಾಲಿನಲ್ಲಿ ದರ್ಶನ್ ತಾಯಿ ರುಕ್ಮಿಣಿ ಮಗನ ಟಿಸಿ ನೀಡಲು ಶಾಲೆಯವರನ್ನು ಕೇಳಿದ್ದಾರೆ. ಆಗ ಶಾಲೆಯವರು ಒಂದು ವರ್ಷದ 20 ಸಾವಿರ ಫೀ ಕಟ್ಟಿ, ಟಿಸಿ ತೆಗೆದುಕೊಂಡು ಹೋಗಲು ಹೇಳಿದ್ದಾರೆ.

ಆಗ ರುಕ್ಮಿಣಿ ನನ್ನ ಬಳಿ ಅಷ್ಟೊಂದು ಹಣ ಇಲ್ಲವೆಂದು ಹೇಳಿದ್ದಾಳೆ. ಜೊತೆಗೆ ಕೊವೀಡ್ ಸಹ ಹೆಚ್ಚಳವಾದ ಹಿನ್ನಲೆಯಲ್ಲಿ ಶಾಲೆಗೆ ಹೋಗಲೇ ಇಲ್ಲ.‌ಬಳಿಕ 2021-22 ನೇ ಸಾಲಿನಲ್ಲಿಯೂ ಟಿಸಿ ಕೇಳಲು ಹೋದಾಗ ಶಾಲೆಯವರು 2 ವರ್ಷದ 40 ಸಾವಿರ ಫೀ ಕಟ್ಟಲು ಹೇಳಿದ್ದಾರೆ. ಇದರಿಂದ ಕಂಗಾಲಾದ ದರ್ಶನ್ ತಾಯಿ ಸೀದಾ ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್ 3 ಕಾರ್ಯಕ್ರಮ ನಡೆಸಿಕೊಡುವ ಜಯಪ್ರಕಾಶ್ ಶೆಟ್ಟಿ ಅವರಿಗೆ ಕರೆ ಮಾಡಿ ತನ್ನ ಸಮಸ್ಯೆ ಹೇಳಿಕೊಂಡೊದ್ದಾಳೆ. ಇದನ್ನ ಬಿಗ್ 3 ಪ್ರಸಾರ ಮಾಡಿ, ಆ ತಾಯಿಗೆ ನ್ಯಾಯ ಒದಗಿಸಿದೆ. ಬಿಗ್ 3 ವರದಿ ಬಳಿಕ ಶಾಲೆಯಿಂದ ಟಿಸಿ ಕೊಡಲಾಯಿತು, ಬೇರೆ ಶಾಲೆಗೆ ಅಡ್ಮಿಶನ್ ಕೂಡಾ ಆಗಿದೆ. 

 


 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?