ಟೀಸಿಗಾಗಿ ತಾಳಿ ಮಾರಲು ಸಿದ್ದವಾಗಿದ್ದ ತಾಯಿಗೆ BIG 3 ನೆರವು, ಮಗನಿಗೆ ಬೇರೆ ಶಾಲೆಯಲ್ಲಿ ಅಡ್ಮಿಶನ್..!

ಟೀಸಿಗಾಗಿ ತಾಳಿ ಮಾರಲು ಸಿದ್ದವಾಗಿದ್ದ ತಾಯಿಗೆ BIG 3 ನೆರವು, ಮಗನಿಗೆ ಬೇರೆ ಶಾಲೆಯಲ್ಲಿ ಅಡ್ಮಿಶನ್..!

Published : Jun 06, 2022, 02:46 PM IST

ಶಾಲಾ ಟೀಸಿ ಕೊಡುವ ವಿಚಾರವಾಗಿ ಕಳೆದ ಎರಡು ವರ್ಷಗಳಿಂದ ಶಾಲಾ ಆಡಳಿತ ಮಂಡಳಿ ಸತಾಯಿಸುತ್ತಾ ಬಂದಿದ್ದು, ಬೇಸತ್ತ ವಿದ್ಯಾರ್ಥಿ ತಾಯಿ (Mother )ತನ್ನ ಮಾಂಗಲ್ಯ ಸರ (Mangalsutra ) ಮಾರಿ, ವಿದ್ಯಾರ್ಥಿಯ ಫೀ ಕಟ್ಟಲು ಸಿದ್ದವಾಗಿದ್ದಳು.‌ ಇಂತ ಮನಕಲಕುವ ಘಟನೆ ಕೊಪ್ಪಳದ ಕನಕಗಿರಿಯಲ್ಲಿ ನಡೆದಿದೆ. 

ಕೊಪ್ಪಳ (ಜೂ. 06):  ಶಾಲಾ ಟೀಸಿ ಕೊಡುವ ವಿಚಾರವಾಗಿ ಕಳೆದ ಎರಡು ವರ್ಷಗಳಿಂದ ಶಾಲಾ ಆಡಳಿತ ಮಂಡಳಿ ಸತಾಯಿಸುತ್ತಾ ಬಂದಿದ್ದು, ಬೇಸತ್ತ ವಿದ್ಯಾರ್ಥಿ ತಾಯಿ (Mother )ತನ್ನ ಮಾಂಗಲ್ಯ ಸರ (Mangalsutra ) ಮಾರಿ, ವಿದ್ಯಾರ್ಥಿಯ ಫೀ ಕಟ್ಟಲು ಸಿದ್ದವಾಗಿದ್ದಳು.‌  ಇಂತ ಮನಕಲಕುವ ಘಟನೆ ಕೊಪ್ಪಳದ ಕನಕಗಿರಿಯಲ್ಲಿ ನಡೆದಿದೆ. 

ಕೊಪ್ಪಳ (Koppala) ಜಿಲ್ಲೆಯ ಕನಕಗಿರಿ ಪಟ್ಟಣದ ಮಾರುತಿರಾವ್ ಹಾಗೂ ರುಕ್ಮೀಣಿ ಎನ್ನುವರ ಮಗ ದರ್ಶನ್ ಗಂಗಾವತಿ ತಾಲೂಕಿನ ಕೆಸರಟ್ಟಿಯ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 2019 ರಲ್ಲಿ 5 ನೇ ತರಗತಿಗೆ ಅಡ್ಮಿಶನ್ ಮಾಡಿಸಿದ್ದಾರೆ. ಆ ವೇಳೆಯಲ್ಲಿ ದರ್ಶನ್ ತಾಯಿ ರುಕ್ಮಿಣಿ 20  ಸಾವಿರ ಫೀಸ್ ತುಂಬಿದ್ದಾರೆ. ಬಳಿಕ ಶಾಲೆಯ ಫೀ ಕಟ್ಟಲು ಸಾಧ್ಯವಾಗದ ಹಿನ್ನಲೆಯಲ್ಲಿ 2020-21ನೇ ಸಾಲಿನಲ್ಲಿ ದರ್ಶನ್ ತಾಯಿ ರುಕ್ಮಿಣಿ ಮಗನ ಟಿಸಿ ನೀಡಲು ಶಾಲೆಯವರನ್ನು ಕೇಳಿದ್ದಾರೆ. ಆಗ ಶಾಲೆಯವರು ಒಂದು ವರ್ಷದ 20 ಸಾವಿರ ಫೀ ಕಟ್ಟಿ, ಟಿಸಿ ತೆಗೆದುಕೊಂಡು ಹೋಗಲು ಹೇಳಿದ್ದಾರೆ.

ಆಗ ರುಕ್ಮಿಣಿ ನನ್ನ ಬಳಿ ಅಷ್ಟೊಂದು ಹಣ ಇಲ್ಲವೆಂದು ಹೇಳಿದ್ದಾಳೆ. ಜೊತೆಗೆ ಕೊವೀಡ್ ಸಹ ಹೆಚ್ಚಳವಾದ ಹಿನ್ನಲೆಯಲ್ಲಿ ಶಾಲೆಗೆ ಹೋಗಲೇ ಇಲ್ಲ.‌ಬಳಿಕ 2021-22 ನೇ ಸಾಲಿನಲ್ಲಿಯೂ ಟಿಸಿ ಕೇಳಲು ಹೋದಾಗ ಶಾಲೆಯವರು 2 ವರ್ಷದ 40 ಸಾವಿರ ಫೀ ಕಟ್ಟಲು ಹೇಳಿದ್ದಾರೆ. ಇದರಿಂದ ಕಂಗಾಲಾದ ದರ್ಶನ್ ತಾಯಿ ಸೀದಾ ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್ 3 ಕಾರ್ಯಕ್ರಮ ನಡೆಸಿಕೊಡುವ ಜಯಪ್ರಕಾಶ್ ಶೆಟ್ಟಿ ಅವರಿಗೆ ಕರೆ ಮಾಡಿ ತನ್ನ ಸಮಸ್ಯೆ ಹೇಳಿಕೊಂಡೊದ್ದಾಳೆ. ಇದನ್ನ ಬಿಗ್ 3 ಪ್ರಸಾರ ಮಾಡಿ, ಆ ತಾಯಿಗೆ ನ್ಯಾಯ ಒದಗಿಸಿದೆ. ಬಿಗ್ 3 ವರದಿ ಬಳಿಕ ಶಾಲೆಯಿಂದ ಟಿಸಿ ಕೊಡಲಾಯಿತು, ಬೇರೆ ಶಾಲೆಗೆ ಅಡ್ಮಿಶನ್ ಕೂಡಾ ಆಗಿದೆ. 

 


 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!