ಬಿಗ್ ಬಾಸ್ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ

ಬಿಗ್ ಬಾಸ್ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ

Published : Dec 16, 2024, 09:37 PM IST

ತುಮಕೂರಿನ ಫಾರ್ಮ್‌ ಹೌಸ್‌ನಲ್ಲಿ ಸ್ಫೋಟಕ ಬಳಕೆ ಪ್ರಕರಣದಲ್ಲಿ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಧುಗಿರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಜೈಲಿನ ಊಟ ಸೇವಿಸಿದ್ದಾರೆ. ಸಿಎಂ ಕಚೇರಿಯಿಂದ ಘಟನೆ ಕುರಿತು ವರದಿ ಕೇಳಲಾಗಿದೆ.

ತುಮಕೂರು (ಡಿ.16): ತುಮಕೂರಿನ ಫಾರ್ಮ್‌ ಹೌಸ್ ಒಂದರ ನೀರಿನ ಕೊಳದಲ್ಲಿ ಸ್ಪೋಟಕ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್‌ನಿಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮಧುಗಿರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ತುಮಕೂರಿನಲ್ಲಿ ಸೋಡಿಯಂ ಮೆಟಲ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೇ ತಿಂಗಳ 26 ರ ರವರೆಗೆ ನ್ಯಾಯಾಂಗ ಬಂಧನ ಜಾರಿ ಮಾಡಲಾಗಿದ್ದು, ಇದೀಗ ತುಮಕೂರು ಜಿಲ್ಲೆಯ ಮಧುಗಿರಿ ಉಪ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಮಧುಗಿರಿ ತಾಲೂಕಿನ ಉಪಕಾರಾಗೃಹದಲ್ಲಿರುವ ಡ್ರೋನ್ ಪ್ರತಾಪ್‌ ಮಧ್ಯಾಹ್ನದ ಊಟವನ್ನು ಜೈಲಿನಲ್ಲಿಯೇ ಸೇವಿಸಿದ್ದಾರೆ. ಕಾರಾಗೃಹದ ಮೆನು ಅನುಸಾರ ಮುದ್ದೆ, ಅನ್ನ, ಸಾಂಬಾರ್ ಹಾಗೂ ಬಾಳೆಹಣ್ಣು ತಿಂದಿದ್ದಾರೆ.

ಅದೇ ರೀತಿ ಡ್ರೋನ್ ಪ್ರತಾಪ್‌ ಸಂಜೆ ಊಟ ಕೂಡ ಸೇವಿಸಿದ್ದಾರೆ. ಆದರೆ, ಕಾರಾಗೃಹದಲ್ಲಿರುವ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್‌ಗೆ ಚಡಪಡಿಕೆ ಆರಂಭವಾಗಿದೆ. ಜೊತೆಗೆ, ಈ ಘಟನೆ ಸಂಬಂದ ಸಿಎಂ ಕಚೇರಿಯಿಂದ ವರದಿ ನೀಡುವಂತೆ ಸೂಚನೆ ಬಂದಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದ್ದು, ಸಿಎಂ ಕಚೇರಿ ಅಧಿಕಾರಿಗಳು ಮಧುಗಿರಿ ಸಿಪಿಐ ಕಚೇರಿಗೆ ಆಗಮಿಸಿದ್ದಾರೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!