ಬಿಗ್ ಬಾಸ್ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ

ಬಿಗ್ ಬಾಸ್ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ

Published : Dec 16, 2024, 09:37 PM IST

ತುಮಕೂರಿನ ಫಾರ್ಮ್‌ ಹೌಸ್‌ನಲ್ಲಿ ಸ್ಫೋಟಕ ಬಳಕೆ ಪ್ರಕರಣದಲ್ಲಿ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಧುಗಿರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಜೈಲಿನ ಊಟ ಸೇವಿಸಿದ್ದಾರೆ. ಸಿಎಂ ಕಚೇರಿಯಿಂದ ಘಟನೆ ಕುರಿತು ವರದಿ ಕೇಳಲಾಗಿದೆ.

ತುಮಕೂರು (ಡಿ.16): ತುಮಕೂರಿನ ಫಾರ್ಮ್‌ ಹೌಸ್ ಒಂದರ ನೀರಿನ ಕೊಳದಲ್ಲಿ ಸ್ಪೋಟಕ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್‌ನಿಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮಧುಗಿರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ತುಮಕೂರಿನಲ್ಲಿ ಸೋಡಿಯಂ ಮೆಟಲ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೇ ತಿಂಗಳ 26 ರ ರವರೆಗೆ ನ್ಯಾಯಾಂಗ ಬಂಧನ ಜಾರಿ ಮಾಡಲಾಗಿದ್ದು, ಇದೀಗ ತುಮಕೂರು ಜಿಲ್ಲೆಯ ಮಧುಗಿರಿ ಉಪ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಮಧುಗಿರಿ ತಾಲೂಕಿನ ಉಪಕಾರಾಗೃಹದಲ್ಲಿರುವ ಡ್ರೋನ್ ಪ್ರತಾಪ್‌ ಮಧ್ಯಾಹ್ನದ ಊಟವನ್ನು ಜೈಲಿನಲ್ಲಿಯೇ ಸೇವಿಸಿದ್ದಾರೆ. ಕಾರಾಗೃಹದ ಮೆನು ಅನುಸಾರ ಮುದ್ದೆ, ಅನ್ನ, ಸಾಂಬಾರ್ ಹಾಗೂ ಬಾಳೆಹಣ್ಣು ತಿಂದಿದ್ದಾರೆ.

ಅದೇ ರೀತಿ ಡ್ರೋನ್ ಪ್ರತಾಪ್‌ ಸಂಜೆ ಊಟ ಕೂಡ ಸೇವಿಸಿದ್ದಾರೆ. ಆದರೆ, ಕಾರಾಗೃಹದಲ್ಲಿರುವ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್‌ಗೆ ಚಡಪಡಿಕೆ ಆರಂಭವಾಗಿದೆ. ಜೊತೆಗೆ, ಈ ಘಟನೆ ಸಂಬಂದ ಸಿಎಂ ಕಚೇರಿಯಿಂದ ವರದಿ ನೀಡುವಂತೆ ಸೂಚನೆ ಬಂದಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದ್ದು, ಸಿಎಂ ಕಚೇರಿ ಅಧಿಕಾರಿಗಳು ಮಧುಗಿರಿ ಸಿಪಿಐ ಕಚೇರಿಗೆ ಆಗಮಿಸಿದ್ದಾರೆ.

20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?