ಬಿಗ್ ಬಾಸ್ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ

ಬಿಗ್ ಬಾಸ್ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ

Published : Dec 16, 2024, 09:37 PM IST

ತುಮಕೂರಿನ ಫಾರ್ಮ್‌ ಹೌಸ್‌ನಲ್ಲಿ ಸ್ಫೋಟಕ ಬಳಕೆ ಪ್ರಕರಣದಲ್ಲಿ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಧುಗಿರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಜೈಲಿನ ಊಟ ಸೇವಿಸಿದ್ದಾರೆ. ಸಿಎಂ ಕಚೇರಿಯಿಂದ ಘಟನೆ ಕುರಿತು ವರದಿ ಕೇಳಲಾಗಿದೆ.

ತುಮಕೂರು (ಡಿ.16): ತುಮಕೂರಿನ ಫಾರ್ಮ್‌ ಹೌಸ್ ಒಂದರ ನೀರಿನ ಕೊಳದಲ್ಲಿ ಸ್ಪೋಟಕ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್‌ನಿಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮಧುಗಿರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ತುಮಕೂರಿನಲ್ಲಿ ಸೋಡಿಯಂ ಮೆಟಲ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೇ ತಿಂಗಳ 26 ರ ರವರೆಗೆ ನ್ಯಾಯಾಂಗ ಬಂಧನ ಜಾರಿ ಮಾಡಲಾಗಿದ್ದು, ಇದೀಗ ತುಮಕೂರು ಜಿಲ್ಲೆಯ ಮಧುಗಿರಿ ಉಪ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಮಧುಗಿರಿ ತಾಲೂಕಿನ ಉಪಕಾರಾಗೃಹದಲ್ಲಿರುವ ಡ್ರೋನ್ ಪ್ರತಾಪ್‌ ಮಧ್ಯಾಹ್ನದ ಊಟವನ್ನು ಜೈಲಿನಲ್ಲಿಯೇ ಸೇವಿಸಿದ್ದಾರೆ. ಕಾರಾಗೃಹದ ಮೆನು ಅನುಸಾರ ಮುದ್ದೆ, ಅನ್ನ, ಸಾಂಬಾರ್ ಹಾಗೂ ಬಾಳೆಹಣ್ಣು ತಿಂದಿದ್ದಾರೆ.

ಅದೇ ರೀತಿ ಡ್ರೋನ್ ಪ್ರತಾಪ್‌ ಸಂಜೆ ಊಟ ಕೂಡ ಸೇವಿಸಿದ್ದಾರೆ. ಆದರೆ, ಕಾರಾಗೃಹದಲ್ಲಿರುವ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್‌ಗೆ ಚಡಪಡಿಕೆ ಆರಂಭವಾಗಿದೆ. ಜೊತೆಗೆ, ಈ ಘಟನೆ ಸಂಬಂದ ಸಿಎಂ ಕಚೇರಿಯಿಂದ ವರದಿ ನೀಡುವಂತೆ ಸೂಚನೆ ಬಂದಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದ್ದು, ಸಿಎಂ ಕಚೇರಿ ಅಧಿಕಾರಿಗಳು ಮಧುಗಿರಿ ಸಿಪಿಐ ಕಚೇರಿಗೆ ಆಗಮಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!