ಬಿಗ್ ಬಾಸ್ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ

ಬಿಗ್ ಬಾಸ್ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ

Published : Dec 16, 2024, 09:37 PM IST

ತುಮಕೂರಿನ ಫಾರ್ಮ್‌ ಹೌಸ್‌ನಲ್ಲಿ ಸ್ಫೋಟಕ ಬಳಕೆ ಪ್ರಕರಣದಲ್ಲಿ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಧುಗಿರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಜೈಲಿನ ಊಟ ಸೇವಿಸಿದ್ದಾರೆ. ಸಿಎಂ ಕಚೇರಿಯಿಂದ ಘಟನೆ ಕುರಿತು ವರದಿ ಕೇಳಲಾಗಿದೆ.

ತುಮಕೂರು (ಡಿ.16): ತುಮಕೂರಿನ ಫಾರ್ಮ್‌ ಹೌಸ್ ಒಂದರ ನೀರಿನ ಕೊಳದಲ್ಲಿ ಸ್ಪೋಟಕ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್‌ನಿಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮಧುಗಿರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ತುಮಕೂರಿನಲ್ಲಿ ಸೋಡಿಯಂ ಮೆಟಲ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೇ ತಿಂಗಳ 26 ರ ರವರೆಗೆ ನ್ಯಾಯಾಂಗ ಬಂಧನ ಜಾರಿ ಮಾಡಲಾಗಿದ್ದು, ಇದೀಗ ತುಮಕೂರು ಜಿಲ್ಲೆಯ ಮಧುಗಿರಿ ಉಪ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಮಧುಗಿರಿ ತಾಲೂಕಿನ ಉಪಕಾರಾಗೃಹದಲ್ಲಿರುವ ಡ್ರೋನ್ ಪ್ರತಾಪ್‌ ಮಧ್ಯಾಹ್ನದ ಊಟವನ್ನು ಜೈಲಿನಲ್ಲಿಯೇ ಸೇವಿಸಿದ್ದಾರೆ. ಕಾರಾಗೃಹದ ಮೆನು ಅನುಸಾರ ಮುದ್ದೆ, ಅನ್ನ, ಸಾಂಬಾರ್ ಹಾಗೂ ಬಾಳೆಹಣ್ಣು ತಿಂದಿದ್ದಾರೆ.

ಅದೇ ರೀತಿ ಡ್ರೋನ್ ಪ್ರತಾಪ್‌ ಸಂಜೆ ಊಟ ಕೂಡ ಸೇವಿಸಿದ್ದಾರೆ. ಆದರೆ, ಕಾರಾಗೃಹದಲ್ಲಿರುವ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್‌ಗೆ ಚಡಪಡಿಕೆ ಆರಂಭವಾಗಿದೆ. ಜೊತೆಗೆ, ಈ ಘಟನೆ ಸಂಬಂದ ಸಿಎಂ ಕಚೇರಿಯಿಂದ ವರದಿ ನೀಡುವಂತೆ ಸೂಚನೆ ಬಂದಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದ್ದು, ಸಿಎಂ ಕಚೇರಿ ಅಧಿಕಾರಿಗಳು ಮಧುಗಿರಿ ಸಿಪಿಐ ಕಚೇರಿಗೆ ಆಗಮಿಸಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!