ಬಿಗ್ ಬಾಸ್ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ

ಬಿಗ್ ಬಾಸ್ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ

Published : Dec 16, 2024, 09:37 PM IST

ತುಮಕೂರಿನ ಫಾರ್ಮ್‌ ಹೌಸ್‌ನಲ್ಲಿ ಸ್ಫೋಟಕ ಬಳಕೆ ಪ್ರಕರಣದಲ್ಲಿ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಧುಗಿರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಜೈಲಿನ ಊಟ ಸೇವಿಸಿದ್ದಾರೆ. ಸಿಎಂ ಕಚೇರಿಯಿಂದ ಘಟನೆ ಕುರಿತು ವರದಿ ಕೇಳಲಾಗಿದೆ.

ತುಮಕೂರು (ಡಿ.16): ತುಮಕೂರಿನ ಫಾರ್ಮ್‌ ಹೌಸ್ ಒಂದರ ನೀರಿನ ಕೊಳದಲ್ಲಿ ಸ್ಪೋಟಕ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್‌ನಿಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮಧುಗಿರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ತುಮಕೂರಿನಲ್ಲಿ ಸೋಡಿಯಂ ಮೆಟಲ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೇ ತಿಂಗಳ 26 ರ ರವರೆಗೆ ನ್ಯಾಯಾಂಗ ಬಂಧನ ಜಾರಿ ಮಾಡಲಾಗಿದ್ದು, ಇದೀಗ ತುಮಕೂರು ಜಿಲ್ಲೆಯ ಮಧುಗಿರಿ ಉಪ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಮಧುಗಿರಿ ತಾಲೂಕಿನ ಉಪಕಾರಾಗೃಹದಲ್ಲಿರುವ ಡ್ರೋನ್ ಪ್ರತಾಪ್‌ ಮಧ್ಯಾಹ್ನದ ಊಟವನ್ನು ಜೈಲಿನಲ್ಲಿಯೇ ಸೇವಿಸಿದ್ದಾರೆ. ಕಾರಾಗೃಹದ ಮೆನು ಅನುಸಾರ ಮುದ್ದೆ, ಅನ್ನ, ಸಾಂಬಾರ್ ಹಾಗೂ ಬಾಳೆಹಣ್ಣು ತಿಂದಿದ್ದಾರೆ.

ಅದೇ ರೀತಿ ಡ್ರೋನ್ ಪ್ರತಾಪ್‌ ಸಂಜೆ ಊಟ ಕೂಡ ಸೇವಿಸಿದ್ದಾರೆ. ಆದರೆ, ಕಾರಾಗೃಹದಲ್ಲಿರುವ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್‌ಗೆ ಚಡಪಡಿಕೆ ಆರಂಭವಾಗಿದೆ. ಜೊತೆಗೆ, ಈ ಘಟನೆ ಸಂಬಂದ ಸಿಎಂ ಕಚೇರಿಯಿಂದ ವರದಿ ನೀಡುವಂತೆ ಸೂಚನೆ ಬಂದಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದ್ದು, ಸಿಎಂ ಕಚೇರಿ ಅಧಿಕಾರಿಗಳು ಮಧುಗಿರಿ ಸಿಪಿಐ ಕಚೇರಿಗೆ ಆಗಮಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!