ರಾಜ್ಯ ರಾಜಕೀಯದಲ್ಲಿ Bitcoin  ಬಿರುಗಾಳಿ, ಶ್ರೀಕಿ ಜೊತೆ ಕೈ ನಾಯಕರ ಮಕ್ಕಳು!

ರಾಜ್ಯ ರಾಜಕೀಯದಲ್ಲಿ Bitcoin ಬಿರುಗಾಳಿ, ಶ್ರೀಕಿ ಜೊತೆ ಕೈ ನಾಯಕರ ಮಕ್ಕಳು!

Published : Nov 11, 2021, 10:14 AM ISTUpdated : Nov 11, 2021, 10:17 AM IST

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣ ಸದ್ಯ ಬಿರುಗಾಳಿಯನ್ನೇ ಎಬ್ಬಿಸಿದೆ. ಹೌದು ಈ ಹಗರಣ ರಾಜಕಾರಣಗಳಲ್ಲಿ ನಡುಕ ಸೃಷ್ಟಿಸಿದೆ. ಈ ಸಂಬಂಧ ತನಿಖೆ ಮುಂದುವರೆದಿದ್ದು, ಅಂತಾರಾ‍ಷ್ಟ್ರೀಯ ಹ್ಯಾಕರ್ ಶ್ರೀಕಿ ಜೊತೆ ಯಾರಿಗೆಲ್ಲ ಸಂಪರ್ಕವಿತ್ತೆಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. 

ಬೆಂಗಳೂರು(ನ.11): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣ ಸದ್ಯ ಬಿರುಗಾಳಿಯನ್ನೇ ಎಬ್ಬಿಸಿದೆ. ಹೌದು ಈ ಹಗರಣ ರಾಜಕಾರಣಗಳಲ್ಲಿ ನಡುಕ ಸೃಷ್ಟಿಸಿದೆ. ಈ ಸಂಬಂಧ ತನಿಖೆ ಮುಂದುವರೆದಿದ್ದು, ಅಂತಾರಾ‍ಷ್ಟ್ರೀಯ ಹ್ಯಾಕರ್ ಶ್ರೀಕಿ ಜೊತೆ ಯಾರಿಗೆಲ್ಲ ಸಂಪರ್ಕವಿತ್ತೆಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. 

ಹೌದು ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಗೆ ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಹಾಗೂ ಹಾವೇರಿಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನ ಜತೆ ಆಪ್ತ ಸ್ನೇಹವಿತ್ತು ಎಂಬ ಸಂಗತಿ ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಎರಡು ಪ್ರತ್ಯೇಕ ಆರೋಪಪಟ್ಟಿಗಳಲ್ಲಿ ಈ ಅಂಶ ಉಲ್ಲೇಖವಾಗಿದೆ.

ಹ್ಯಾರಿಸ್‌ ಪುತ್ರ ಉಮರ್‌ ನಲಪಾಡ್‌ ಹಾಗೂ ರುದ್ರಪ್ಪ ಲಮಾಣಿ ಪುತ್ರ ದರ್ಶನ್‌ ಲಮಾಣಿ ಜತೆ ಆತ್ಮೀಯ ಒಡನಾಟ ಹೊಂದಿದ್ದ ಶ್ರೀಕಿ, ಈ ನಾಯಕರ ಮಕ್ಕಳ ಜತೆ ಹಣಕಾಸು ವ್ಯವಹಾರ ಸಹ ಹೊಂದಿದ್ದ. ಅಲ್ಲದೆ, 2018ರಲ್ಲಿ ಉಮರ್‌ನ ಸೋದರ ಮೊಹಮ್ಮದ್‌ ನಲಪಾಡ್‌ ವಿರುದ್ಧ ದಾಖಲಾಗಿದ್ದ ಯುಬಿ ಸಿಟಿ ಪಬ್‌ ಗಲಾಟೆ ಪ್ರಕರಣದಲ್ಲಿ ಶ್ರೀಕಿ ಆರೋಪಿಯಾಗಿದ್ದ. ಹಾಗೆಯೇ 2020ರಲ್ಲಿ ರುದ್ರಪ್ಪ ಲಮಾಣಿ ಪುತ್ರ ದರ್ಶನ್‌ ಲಮಾಣಿ ಬಂಧಿತನಾಗಿದ್ದ ಡ್ರಗ್ಸ್‌ ಕೇಸ್‌ನಲ್ಲಿ ಶ್ರೀಕಿಯನ್ನು ಸಿಸಿಬಿ ಬಂಧಿಸಿತ್ತು. ಈ ಬಗ್ಗೆ ನ್ಯಾಯಾಲಯಕ್ಕೆ ಸಿಸಿಬಿ ಸಲ್ಲಿಸಿರುವ ಆರೋಪ ಪಟ್ಟಿಗಳಲ್ಲಿ ಕೂಡ ಉಲ್ಲೇಖವಾಗಿದೆ. ಈ ಮೂಲಕ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ರಾಜಕೀಯ ವಾಗ್ದಾಳಿ ಮತ್ತೊಂದು ಮಜಲು ಪಡೆಯುವ ಸಾಧ್ಯತೆಗಳಿವೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more