ಮೀಸಲಾತಿಗೆ ಮತ್ತೊಂದು ಸಮುದಾಯ ಹೋರಾಟಕ್ಕೆ ಸಿದ್ಧ: ಸಿಎಂಗೆ ಶುರುವಾಯ್ತು ಸಂಕಷ್ಟ

Feb 18, 2021, 4:22 PM IST

ಬೆಂಗಳೂರು, (ಪೆ.18): ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ರೆ, ಇತ್ತ ಬಿಜೆಪಿ ಸರ್ಕಾರಕ್ಕೆ ಟೆನ್ಷನ್ ಶುರುವಾಗಿದೆ.

ವಿವಿಧ ಸಮುದಾಯಗಳ ಮೀಸಲಾತಿ ಹೋರಾಟದ ಹೊತ್ತಲ್ಲೇ ಸಿಎಂಗೆ ಮತ್ತೊಂದು ಬಿಗ್ ಶಾಕ್

ಹೌದು...ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಮೀಸಲಾತಿಯದ್ದೇ ತಲೆನೋವು ತಂದಿಟ್ಟಿದೆ. ಕುರುಬ, ಪಂಚಮಸಾಲಿ, ವಾಲ್ಮೀಕಿ ಬೆನ್ನಲ್ಲೇ ಇದೀಗ ಮತ್ತೊಂದು ಸಮುದಾಯ ಹೋರಾಟಕ್ಕೆ ಸಿದ್ಧವಾಗುತ್ತಿದೆ.