ದಳ ಕಮಲ ಸ್ನೇಹಕ್ಕೆ ನೀರೆರೆದ ಕಾವೇರಿ: ಸರ್ಕಾರಕ್ಕೆ ಜಂಟಿಯಾಗಿ ಹೋದ ಸಂದೇಶವೇನು..?

ದಳ ಕಮಲ ಸ್ನೇಹಕ್ಕೆ ನೀರೆರೆದ ಕಾವೇರಿ: ಸರ್ಕಾರಕ್ಕೆ ಜಂಟಿಯಾಗಿ ಹೋದ ಸಂದೇಶವೇನು..?

Published : Sep 28, 2023, 02:41 PM IST

ಅಂದು ಮೈತ್ರಿ ಸರ್ಕಾರ.. ಇಂದು ಸ್ನೇಹದೊಂದಿಗೆ ಜಂಟಿ ಸಮರ
ನೀರಿನಿಂದ ಶುರುವಾದ ದೋಸ್ತಿ ಎದುರಾಳಿಗೆ ನೀರು ಕುಡಿಸುತ್ತಾ..?
ದಿನೇ ದಿನೇ ಬಿಗಿಯಾಗುತ್ತಿದೆ ಬಿಜೆಪಿ & ಜೆಡಿಎಸ್ ಸ್ನೇಹ ಬಂಧ..!

ಇಬ್ಬರೂ ಕೂಡ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದವರು. ಇಬ್ಬರೂ ಒಂದು ಕಾಲದಲ್ಲಿ ಮೈತ್ರಿ ಮಾಡಿಕೊಂಡು ಕರ್ನಾಟದಲ್ಲಿ ಆಳ್ವಿಕೆ ಮಾಡಿದವರು. ಆದ್ರೆ ಬದಲಾದ ರಾಜಕೀಯ ಸನ್ನಿವೇಶಗಳು ಒಬ್ಬರಲ್ಲಿ ಮಹಾನ್ ಅಂತರವನ್ನೇ ಸೃಷ್ಟಿಸಿತ್ತು. ಆದ್ರೆ ಈಗ 17 ವರ್ಷಗಳ ನಂತರ ಆ ಇಬ್ಬರು ಸ್ನೇಹ ಹಸ್ತ ಚಾಚಿ ಮುಂಬರುವ ಚುನಾವಣೆ ಮೇಲೆ ಕಣ್ಣೀಟ್ಟಿದ್ದಾರೆ. ಕರ್ನಾಟಕದಲ್ಲಿ(Karnataka) ಈಗ ಅತಿ ದೊಡ್ಡದಾಗಿ ಸದ್ದು ಮಾಡ್ತಾ ಇರೋದು ಅಂದರೆ ಅದು ಕಾವೇರಿ (Cauvery) ನದಿ. ನಮ್ಮ ಜೀವ ನದಿಯ ನೀರನ್ನ ಬೇಕಾಬಿಟ್ಟಿಯಾಗಿ ತಮಿಳುನಾಡಿಗೆ(Tamilnadu) ಬಿಡ್ತಾ ಇರೋದಕ್ಕೆ ರೈತರು, ಕನ್ನಡಿಗರು ತಾಳ್ಮೆ ಮೀರಿದ್ದಾರೆ. ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬೀದಿಗಿಳಿದಿದ್ದಾರೆ. ಇನ್ನೊಂದು ಕಡೆಯಲ್ಲಿ ಕಾವೇರಿ ವಿಚಾರ ರಾಜಕೀಯವಾಗಿಯೂ ವಿಪಕ್ಷಗಳ ಕೈಗೆ ಸಿಕ್ಕ ದೊಡ್ಡ ಅಸ್ತ್ರವೇ ಆಗಿದೆ. ವಿಪಕ್ಷ ನಾಯಕರು ಕೂಡ ಬೀದಿಗಿಳಿದು ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದಾರೆ. ಬಿಜೆಪಿಯ (BJP) ಕೇಸರಿ ನಾಯಕರು ಕಾಂಗ್ರೆಸ್(Congress) ಸರ್ಕಾರದ ವಿರುದ್ಧ ಜೋರಾದ ಧ್ವನಿಯಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ. ಇದೀಗ ಕೇಸರಿ ನಾಯಕರಿಗೆ ಸಾಥ್ ನೀಡ್ತಾ ಇರೋರು ಮತ್ಯಾರು ಅಲ್ಲ, ದಳ ಪತಿಗಳು. ಅದು 2008.. ಕರ್ನಾಟಕದಲ್ಲಿ ಅತಂತ್ರ ಫಲಿತಾಂಶ ಎದುರಾಗಿತ್ತು. ಆಗ ಸರ್ಕಾರ ಮಾಡೋಕೆ ಕೆಲವೇ ಕೆಲವು ಸೀಟುಗಳ ಶಾರ್ಟೇಜ್ ಕಂಡಿದ್ದ ಭಾರತೀಯ ಜನತಾ ಪಕ್ಷ , ಜನತಾದಳದೊಂದಿಗೆ ಮೈತ್ರಿ ಸಂಕಲ್ಪ ಮಾಡಿಕೊಳ್ತು. ಎರಡೂ ಪಕ್ಷಗಳು ಸೇರಿಕೊಂಡು ಅಧಿಕಾರ ಸ್ವೀಕಾರ ಮಾಡಿದ್ರೆ ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕೂತುಕೊಳ್ತು.20:20 ಸೂತ್ರಕ್ಕೆ ಒಪ್ಪಿದ್ದ ಉಭಯ ಪಕ್ಷಗಳ ನಡುವೆ ಮೂಡಿದ ರಾಜಕೀಯ ಭಿನ್ನಾಭಿಪ್ರಾಯ ಎರಡು ಮಹಾನ್ ನಾಯಕರ ಮಧ್ಯವೂ ಬಿರುಕು ತಂದಿತು. ಹೆಚ್ ಡಿ ಕುಮಾರಸ್ವಾಮಿ ಹಾಗೂ ಬಿ ಎಸ್ ಯಡಿಯೂರಪ್ಪನವರ ಮಧ್ಯ ಮನಸ್ತಾಪ ಉಂಟಾಯ್ತು. ಈಗ ಮತ್ತೆ ಬಾಡಿ ಹೋದ ದೋಸ್ತಿ ಚಿಗುರೋ ಸಮಯ ಬಂದಿದೆ.. ನಿಸ್ತೇಜ ಸ್ನೇಹಕ್ಕೆ ನೀರೆರೆದಿದೆ ಕಾವೇರಿ ವಿಚಾರ.

ಇದನ್ನೂ ವೀಕ್ಷಿಸಿ:  ಹೇಗಿದೆ ಗೊತ್ತಾ ಭಾರತ-ಕೆನಡಾ ಸಂಬಂಧ ? ಖಲಿಸ್ತಾನಿಗಳ ಟಾರ್ಗೆಟ್ ಹಿಂದಿರೋ ಅಸಲಿ ಕತೆ ಏನು ?

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more