ಆದಿಚುಂಚನಗಿರಿ ಶ್ರೀಗಳ ಎಚ್ಚರಿಕೆಗೂ ಮಣಿಯದ ಬಿಜೆಪಿ ನಾಯಕರು! ದಾಖಲೆ ಸಂಗ್ರಹಿಸಲು ಮುಂದಾದ ಸಿ.ಟಿ.ರವಿ!

ಆದಿಚುಂಚನಗಿರಿ ಶ್ರೀಗಳ ಎಚ್ಚರಿಕೆಗೂ ಮಣಿಯದ ಬಿಜೆಪಿ ನಾಯಕರು! ದಾಖಲೆ ಸಂಗ್ರಹಿಸಲು ಮುಂದಾದ ಸಿ.ಟಿ.ರವಿ!

Published : Mar 21, 2023, 06:52 PM IST

ಉರಿಗೌಡ ಮತ್ತು ನಂಜೇಗೌಡರ ಪಾತ್ರಗಳು ಕಾಲ್ಪನಿಕ ಪಾತ್ರಗಳಲ್ಲ, ಸತ್ಯದ ಪಾತ್ರಗಳು ಆಗಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಬೆಂಗಳೂರು (ಮಾ.21): ರಾಜ್ಯದಲ್ಲಿ ಒಕ್ಕಲಿಗ ಸಮುದಾಯದ ಪಾತ್ರಗಳಾದ ನಂಜೇಗೌಡ ಮತ್ತು ಉರಿಗೌಡ ವಿಚಾರದ ಬಗ್ಗೆ ಯಾರೊಬ್ಬರೂ ಮಾತನಾಡಬಾರದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದರು. ಆದರೆ, ಇದಕ್ಕೂ ಬಗ್ಗದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಉರಿಗೌಡ ಮತ್ತು ನಂಜೇಗೌಡರ ಪಾತ್ರಗಳು ಕಾಲ್ಪನಿಕ ಪಾತ್ರಗಳಲ್ಲ, ಸತ್ಯದ ಪಾತ್ರಗಳು ಆಗಿವೆ ಎಂದು ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಟಿ ರವಿ ಅವರು, ಸಾಹಿತಿ ಜವರೇಗೌಡರು ಸುವರ್ಣ ಮಂಡ್ಯ ಪುಸ್ತಕದಲ್ಲಿ ಉರಿಗೌಡ, ನಂಜೇಗೌಡರ ಇತಿಹಾಸವನ್ನು ದಾಖಲಿಸಿದ್ದಾರೆ. ಸುಳ್ಳು ಅಂತ ಹೇಳಿದೋರು, ಕಾಲ್ಪನಿಕ ಅನ್ನೋರು ಕ್ಷಮೆ ಯಾಚಿಸಬೇಕು.ಆದರೆ, ಇತಿಹಾಸದ ಬಗ್ಗೆ ದಾಖಲೆಗಳಿಲ್ಲ ಎಂದು ಸ್ವಾಮೀಜಿಗಳು ಸಲಹೆ ಕೊಟ್ಟಿದ್ದು, ಅವರ ಮಾತನ್ನು ಗೌರವಿಸುತ್ತೇವೆ. ಒಕ್ಕಲಿಗ ವೀರರ ಇತಿಹಾಸದ ಬಗ್ಗೆ ಸಂಶೋಧನೆ ಮಾಡಿಸುತ್ತೇವೆ. ಜೊತೆಗೆ, ಈ ಬಗ್ಗೆ ಸ್ವಾಮೀಜಿಗಳೊಂದಿಗೆ ಮಾತನಾಡಿ, ಸಂಶೋಧನೆ ಮಾಡಲು ಸಹಕಾರ ನೀಡುವಂತೆ ಮನವಿ ಮಾಡಲಾಗುವುದು ಎಂದು ಸಿಟಿ ರವಿ ಹೇಳಿದ್ದಾರೆ.

ಆದಿಚುಂಚನಗರಿ ಶ್ರೀಗಳಿಂದ ಬಿಜೆಪಿ ಒಕ್ಕಲಿಗ ಸಚಿವರಿಗೆ ತರಾಟೆ: ಉರಿಗೌಡ, ನಂಜೇಗೌಡರ ಬಗ್ಗೆ ಚರ್ಚಿಸದಂತೆ ಎಚ್ಚರಿಕೆ

ಆದಿಚುಂಚನಗಿರಿ ಸ್ವಾಮೀಜಿ ನನ್ನ ಜೊತೆ ಮಾತಾಡಿದ್ದಾರೆ. ಗುರುಗಳ ಮಾತಿಗೆ ನಾವು ಗೌರವ ಕೊಡ್ತಿವಿ. ಟಿಪ್ಪು ಮತಾಂಧ ಅನ್ನೊದು ವಿವಾದ. ಅವನನ್ನ ವೈಭವಿಕರಿಸಲಾಗಿದೆ ಇತಿಹಾಸದಲ್ಲಿ ತಿಳಿಸಬೇಕಾದ್ದನ್ನ ತಿಳಿಸಿಲ್ಲ. ಬ್ರಿಟಿಷರು, ಪರ್ಶಿಯನ್ನರು ಎಲ್ಲರು ಸಹ ನಮ್ಮ ಆಕ್ರಮಣಕಾರರೇ. ಬ್ರಿಟಿಷರು ಬಂದ ತಕ್ಷಣ ಪರ್ಶಿಯನ್ನರು, ಡಚ್ಚರು ನಮ್ಮ ನೆಂಟ್ರು ಆಗಲ್ಲ. ಎಲ್ಲರೂ ಲೂಟಿ ಮಾಡಿದ್ದಾರೆ. ನಾವು ಮಕ್ಕಳಿಗೆ ಅಕ್ಬರ್‌ ನ ದಿ ಗ್ರೇಟ್ ಅಂತ ಪಾಠ ಹೇಳಿ‌ ಕೊಟ್ಟಿದ್ದೇವೆ. ಆದರೆ, ರಾಣಪ್ರತಾಪ್ ಸಿಂಗ್‌ ನನ್ನ ದಿ ಗ್ರೇಟ್ ಅಂತ ಹೇಳಿಕೊಡಲಿಲ್ಲ‌ ಎಂದು ಕಿಡಿಕಾರಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more