ಆದಿಚುಂಚನಗಿರಿ ಶ್ರೀಗಳ ಎಚ್ಚರಿಕೆಗೂ ಮಣಿಯದ ಬಿಜೆಪಿ ನಾಯಕರು! ದಾಖಲೆ ಸಂಗ್ರಹಿಸಲು ಮುಂದಾದ ಸಿ.ಟಿ.ರವಿ!

ಆದಿಚುಂಚನಗಿರಿ ಶ್ರೀಗಳ ಎಚ್ಚರಿಕೆಗೂ ಮಣಿಯದ ಬಿಜೆಪಿ ನಾಯಕರು! ದಾಖಲೆ ಸಂಗ್ರಹಿಸಲು ಮುಂದಾದ ಸಿ.ಟಿ.ರವಿ!

Published : Mar 21, 2023, 06:52 PM IST

ಉರಿಗೌಡ ಮತ್ತು ನಂಜೇಗೌಡರ ಪಾತ್ರಗಳು ಕಾಲ್ಪನಿಕ ಪಾತ್ರಗಳಲ್ಲ, ಸತ್ಯದ ಪಾತ್ರಗಳು ಆಗಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಬೆಂಗಳೂರು (ಮಾ.21): ರಾಜ್ಯದಲ್ಲಿ ಒಕ್ಕಲಿಗ ಸಮುದಾಯದ ಪಾತ್ರಗಳಾದ ನಂಜೇಗೌಡ ಮತ್ತು ಉರಿಗೌಡ ವಿಚಾರದ ಬಗ್ಗೆ ಯಾರೊಬ್ಬರೂ ಮಾತನಾಡಬಾರದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದರು. ಆದರೆ, ಇದಕ್ಕೂ ಬಗ್ಗದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಉರಿಗೌಡ ಮತ್ತು ನಂಜೇಗೌಡರ ಪಾತ್ರಗಳು ಕಾಲ್ಪನಿಕ ಪಾತ್ರಗಳಲ್ಲ, ಸತ್ಯದ ಪಾತ್ರಗಳು ಆಗಿವೆ ಎಂದು ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಟಿ ರವಿ ಅವರು, ಸಾಹಿತಿ ಜವರೇಗೌಡರು ಸುವರ್ಣ ಮಂಡ್ಯ ಪುಸ್ತಕದಲ್ಲಿ ಉರಿಗೌಡ, ನಂಜೇಗೌಡರ ಇತಿಹಾಸವನ್ನು ದಾಖಲಿಸಿದ್ದಾರೆ. ಸುಳ್ಳು ಅಂತ ಹೇಳಿದೋರು, ಕಾಲ್ಪನಿಕ ಅನ್ನೋರು ಕ್ಷಮೆ ಯಾಚಿಸಬೇಕು.ಆದರೆ, ಇತಿಹಾಸದ ಬಗ್ಗೆ ದಾಖಲೆಗಳಿಲ್ಲ ಎಂದು ಸ್ವಾಮೀಜಿಗಳು ಸಲಹೆ ಕೊಟ್ಟಿದ್ದು, ಅವರ ಮಾತನ್ನು ಗೌರವಿಸುತ್ತೇವೆ. ಒಕ್ಕಲಿಗ ವೀರರ ಇತಿಹಾಸದ ಬಗ್ಗೆ ಸಂಶೋಧನೆ ಮಾಡಿಸುತ್ತೇವೆ. ಜೊತೆಗೆ, ಈ ಬಗ್ಗೆ ಸ್ವಾಮೀಜಿಗಳೊಂದಿಗೆ ಮಾತನಾಡಿ, ಸಂಶೋಧನೆ ಮಾಡಲು ಸಹಕಾರ ನೀಡುವಂತೆ ಮನವಿ ಮಾಡಲಾಗುವುದು ಎಂದು ಸಿಟಿ ರವಿ ಹೇಳಿದ್ದಾರೆ.

ಆದಿಚುಂಚನಗರಿ ಶ್ರೀಗಳಿಂದ ಬಿಜೆಪಿ ಒಕ್ಕಲಿಗ ಸಚಿವರಿಗೆ ತರಾಟೆ: ಉರಿಗೌಡ, ನಂಜೇಗೌಡರ ಬಗ್ಗೆ ಚರ್ಚಿಸದಂತೆ ಎಚ್ಚರಿಕೆ

ಆದಿಚುಂಚನಗಿರಿ ಸ್ವಾಮೀಜಿ ನನ್ನ ಜೊತೆ ಮಾತಾಡಿದ್ದಾರೆ. ಗುರುಗಳ ಮಾತಿಗೆ ನಾವು ಗೌರವ ಕೊಡ್ತಿವಿ. ಟಿಪ್ಪು ಮತಾಂಧ ಅನ್ನೊದು ವಿವಾದ. ಅವನನ್ನ ವೈಭವಿಕರಿಸಲಾಗಿದೆ ಇತಿಹಾಸದಲ್ಲಿ ತಿಳಿಸಬೇಕಾದ್ದನ್ನ ತಿಳಿಸಿಲ್ಲ. ಬ್ರಿಟಿಷರು, ಪರ್ಶಿಯನ್ನರು ಎಲ್ಲರು ಸಹ ನಮ್ಮ ಆಕ್ರಮಣಕಾರರೇ. ಬ್ರಿಟಿಷರು ಬಂದ ತಕ್ಷಣ ಪರ್ಶಿಯನ್ನರು, ಡಚ್ಚರು ನಮ್ಮ ನೆಂಟ್ರು ಆಗಲ್ಲ. ಎಲ್ಲರೂ ಲೂಟಿ ಮಾಡಿದ್ದಾರೆ. ನಾವು ಮಕ್ಕಳಿಗೆ ಅಕ್ಬರ್‌ ನ ದಿ ಗ್ರೇಟ್ ಅಂತ ಪಾಠ ಹೇಳಿ‌ ಕೊಟ್ಟಿದ್ದೇವೆ. ಆದರೆ, ರಾಣಪ್ರತಾಪ್ ಸಿಂಗ್‌ ನನ್ನ ದಿ ಗ್ರೇಟ್ ಅಂತ ಹೇಳಿಕೊಡಲಿಲ್ಲ‌ ಎಂದು ಕಿಡಿಕಾರಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!