Anti Conversion Bill: ಲವ್ ಜಿಹಾದ್‌ನಲ್ಲಿ ಬಿಜೆಪಿಯ ನಾಯಕರ ಮಕ್ಕಳಿದ್ದಾರೆ: ಬಿ ಕೆ ಹರಿಪ್ರಸಾದ್

Anti Conversion Bill: ಲವ್ ಜಿಹಾದ್‌ನಲ್ಲಿ ಬಿಜೆಪಿಯ ನಾಯಕರ ಮಕ್ಕಳಿದ್ದಾರೆ: ಬಿ ಕೆ ಹರಿಪ್ರಸಾದ್

Published : Dec 21, 2021, 03:29 PM IST

'ಲವ್ ಜಿಹಾದ್‌ನಲ್ಲಿ (Love Jihad) ಬಿಜೆಪಿಯ ದೊಡ್ಡ ನಾಯಕರ ಮಕ್ಕಳಿದ್ದಾರೆ. ಮೊದಲು ಆ ದೊಡ್ಡ ನಾಯಕರ ಮಕ್ಕಳ ಮೇಲೆ ಕ್ರಮ ಕೈಗೊಳ್ಳಲಿ. ನಾವು ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತೇವೆ' ಎಂದು ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ. 

ಬೆಂಗಳೂರು (ಡಿ. 21): ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆ (Anti Conversion Bill) ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಉಭಯ ಸದನಗಳಲ್ಲಿ ಮಸೂದೆಗೆ ಒಪ್ಪಿಗೆ ದೊರೆತು ಕಾಯಿದೆ ಅನುಷ್ಠಾನಗೊಂಡರೆ ರಾಜ್ಯದಲ್ಲಿ ಒತ್ತಾಯ ಪೂರ್ವಕ ಹಾಗೂ ಆಮಿಷವೊಡ್ಡಿ ಮತಾಂತರ ಮಾಡುವ ಚಟುವಟಿಕೆಗಳು ನಿಷೇಧವಾಗಲಿವೆ.

ಪ್ರಸ್ತಾವಿತ ಮಸೂದೆಯಲ್ಲಿ ಒತ್ತಾಯ, ಆಮಿಷ ಒಡ್ಡಿ ಮತಾಂತರ ಮಾಡುವುದನ್ನು ನಿಷೇಧಿಸುವ ಪ್ರಸ್ತಾಪ ಇದೆ. ಪರಿಶಿಷ್ಟಜಾತಿ, ಪಂಗಡ, ಅಪ್ರಾಪ್ತರು, ಮಹಿಳೆಯರು, ಬುದ್ಧಿಮಾಂದ್ಯರನ್ನು ಮತಾಂತರ ಮಾಡಿದವನಿಗೆ ಕನಿಷ್ಠ 3 ವರ್ಷದಿಂದ 10 ವರ್ಷದವವರೆಗೆ ಜೈಲು, 50 ಸಾವಿರ ರು. ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಇತರ ವರ್ಗದವರನ್ನು ಮತಾಂತರ ಮಾಡಿದರೆ ಕನಿಷ್ಠ 3 ವರ್ಷದಿಂದ 5 ವರ್ಷದವರೆಗೆ ಜೈಲು ಮತ್ತು 25 ಸಾವಿರ ರು. ದಂಡ, ಸಾಮೂಹಿಕ ಮತಾಂತರ ಮಾಡಿದವನಿಗೆ 3 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರು. ದಂಡ ವಿಧಿಸಲು ಅವಕಾಶವಿದೆ ಕಲ್ಪಿಸಲಾಗಿದೆ. 

'ಲವ್ ಜಿಹಾದ್‌ನಲ್ಲಿ ಬಿಜೆಪಿಯ ದೊಡ್ಡ ನಾಯಕರ ಮಕ್ಕಳಿದ್ದಾರೆ. ಮೊದಲು ಆ ದೊಡ್ಡ ನಾಯಕರ ಮಕ್ಕಳ ಮೇಲೆ ಕ್ರಮ ಕೈಗೊಳ್ಳಲಿ. ನಾವು ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತೇವೆ' ಎಂದು ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more