Anti Conversion Bill: ಲವ್ ಜಿಹಾದ್‌ನಲ್ಲಿ ಬಿಜೆಪಿಯ ನಾಯಕರ ಮಕ್ಕಳಿದ್ದಾರೆ: ಬಿ ಕೆ ಹರಿಪ್ರಸಾದ್

Anti Conversion Bill: ಲವ್ ಜಿಹಾದ್‌ನಲ್ಲಿ ಬಿಜೆಪಿಯ ನಾಯಕರ ಮಕ್ಕಳಿದ್ದಾರೆ: ಬಿ ಕೆ ಹರಿಪ್ರಸಾದ್

Published : Dec 21, 2021, 03:29 PM IST

'ಲವ್ ಜಿಹಾದ್‌ನಲ್ಲಿ (Love Jihad) ಬಿಜೆಪಿಯ ದೊಡ್ಡ ನಾಯಕರ ಮಕ್ಕಳಿದ್ದಾರೆ. ಮೊದಲು ಆ ದೊಡ್ಡ ನಾಯಕರ ಮಕ್ಕಳ ಮೇಲೆ ಕ್ರಮ ಕೈಗೊಳ್ಳಲಿ. ನಾವು ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತೇವೆ' ಎಂದು ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ. 

ಬೆಂಗಳೂರು (ಡಿ. 21): ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆ (Anti Conversion Bill) ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಉಭಯ ಸದನಗಳಲ್ಲಿ ಮಸೂದೆಗೆ ಒಪ್ಪಿಗೆ ದೊರೆತು ಕಾಯಿದೆ ಅನುಷ್ಠಾನಗೊಂಡರೆ ರಾಜ್ಯದಲ್ಲಿ ಒತ್ತಾಯ ಪೂರ್ವಕ ಹಾಗೂ ಆಮಿಷವೊಡ್ಡಿ ಮತಾಂತರ ಮಾಡುವ ಚಟುವಟಿಕೆಗಳು ನಿಷೇಧವಾಗಲಿವೆ.

ಪ್ರಸ್ತಾವಿತ ಮಸೂದೆಯಲ್ಲಿ ಒತ್ತಾಯ, ಆಮಿಷ ಒಡ್ಡಿ ಮತಾಂತರ ಮಾಡುವುದನ್ನು ನಿಷೇಧಿಸುವ ಪ್ರಸ್ತಾಪ ಇದೆ. ಪರಿಶಿಷ್ಟಜಾತಿ, ಪಂಗಡ, ಅಪ್ರಾಪ್ತರು, ಮಹಿಳೆಯರು, ಬುದ್ಧಿಮಾಂದ್ಯರನ್ನು ಮತಾಂತರ ಮಾಡಿದವನಿಗೆ ಕನಿಷ್ಠ 3 ವರ್ಷದಿಂದ 10 ವರ್ಷದವವರೆಗೆ ಜೈಲು, 50 ಸಾವಿರ ರು. ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಇತರ ವರ್ಗದವರನ್ನು ಮತಾಂತರ ಮಾಡಿದರೆ ಕನಿಷ್ಠ 3 ವರ್ಷದಿಂದ 5 ವರ್ಷದವರೆಗೆ ಜೈಲು ಮತ್ತು 25 ಸಾವಿರ ರು. ದಂಡ, ಸಾಮೂಹಿಕ ಮತಾಂತರ ಮಾಡಿದವನಿಗೆ 3 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರು. ದಂಡ ವಿಧಿಸಲು ಅವಕಾಶವಿದೆ ಕಲ್ಪಿಸಲಾಗಿದೆ. 

'ಲವ್ ಜಿಹಾದ್‌ನಲ್ಲಿ ಬಿಜೆಪಿಯ ದೊಡ್ಡ ನಾಯಕರ ಮಕ್ಕಳಿದ್ದಾರೆ. ಮೊದಲು ಆ ದೊಡ್ಡ ನಾಯಕರ ಮಕ್ಕಳ ಮೇಲೆ ಕ್ರಮ ಕೈಗೊಳ್ಳಲಿ. ನಾವು ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತೇವೆ' ಎಂದು ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more