ಪಂಚಮಸಾಲಿ ಸಮುದಾಯದ 2 A ಮೀಸಲಾತಿ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹಾವನೂರು ವರದಿ ಮೂಲಕ ವೀರಶೈವ ಲಿಂಗಾಯತರಿಗೆ ಆಗಿರುವ ಅನ್ಯಾಯ ಸರಿಪಡಿಸಲು ಮೀಸಲಾತಿ ಬೇಕೆಂದು ಧಾರವಾಡ ಪಶ್ಚಿಮ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಒತ್ತಾಯಪಡಿಸಿದ್ದಾರೆ.
ಬೆಂಗಳೂರು (ಫೆ. 21): ಪಂಚಮಸಾಲಿ ಸಮುದಾಯದ 2 A ಮೀಸಲಾತಿ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹಾವನೂರು ವರದಿ ಮೂಲಕ ವೀರಶೈವ ಲಿಂಗಾಯತರಿಗೆ ಆಗಿರುವ ಅನ್ಯಾಯ ಸರಿಪಡಿಸಲು ಮೀಸಲಾತಿ ಬೇಕೆಂದು ಧಾರವಾಡ ಪಶ್ಚಿಮ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಒತ್ತಾಯಪಡಿಸಿದ್ದಾರೆ.
ಈ ಹೋರಾಟ ಕೇವಲ ಪಂಚಮಸಾಲಿಗಳಿಗೆ ಮಾತ್ರ ಸೀಮಿತವಲ್ಲ. ಇಡೀ ವೀರಶೈವ ಸಮುದಾಯದ ಪರವಾಗಿ ಹೋರಾಟ ನಡೆಸುತ್ತಿದ್ದೇವೆ. ನಮ್ಮದು ಹಿಂದುಳಿದ ಸಮಾಜ. ನಮ್ಮ ಸಮುದಾಯದ ಯುವಕರಿಗೆ ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಮೀಸಲಾತಿ ದೊರೆಯಲು ಅನುಕೂಲವಾಗುವಂತೆ ಒಬಿಸಿಯಲ್ಲಿ ಹೆಚ್ಚು ಮೀಸಲಾತಿ ಇರುವ 2 ಎ ವ್ಯಾಪ್ತಿಗೆ ಸೇರಿಸಬೇಕು ಎಂದು ಒತ್ತಾಯಪಡಿಸಿದ್ದಾರೆ.