ರಾಜ್ಯದಲ್ಲಿ ಹೆಚ್ಚುತ್ತಿದೆ ಮತಾಂತರ, ನನ್ನ ತಾಯಿಯನ್ನೂ ಬಿಟ್ಟಿಲ್ಲ! ಸದನದಲ್ಲಿ ಗೂಳಿಹಟ್ಟಿ ಗೋಳು!

ರಾಜ್ಯದಲ್ಲಿ ಹೆಚ್ಚುತ್ತಿದೆ ಮತಾಂತರ, ನನ್ನ ತಾಯಿಯನ್ನೂ ಬಿಟ್ಟಿಲ್ಲ! ಸದನದಲ್ಲಿ ಗೂಳಿಹಟ್ಟಿ ಗೋಳು!

Published : Sep 23, 2021, 01:43 PM ISTUpdated : Sep 23, 2021, 01:52 PM IST

ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಪ್ರಕ್ರಿಯೆ ಚಟುವಟಿಕೆ ವ್ಯಾಪಕವಾಗಿದ್ದು, ಸ್ವತಃ ತಮ್ಮ ತಾಯಿಯನ್ನೇ ಆಮಿಷವೊಡ್ಡಿ ಮತಾಂತರ ಮಾಡಲಾಗಿದೆ ಎಂದು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿಶೇಖರ್‌ ಅಳಲು ತೋಡಿಕೊಂಡಿದ್ದಾರೆ. 

ಬೆಂಗಳೂರು (ಸೆ. 23): ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಪ್ರಕ್ರಿಯೆ ಚಟುವಟಿಕೆ ವ್ಯಾಪಕವಾಗಿದ್ದು, ಸ್ವತಃ ತಮ್ಮ ತಾಯಿಯನ್ನೇ ಆಮಿಷವೊಡ್ಡಿ ಮತಾಂತರ ಮಾಡಲಾಗಿದೆ ಎಂದು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿಶೇಖರ್‌ ಅಳಲು ತೋಡಿಕೊಂಡ ಘಟನೆಗೆವಿಧಾನಸಭೆ ಸಾಕ್ಷಿಯಾಯಿತು. ಶೇಖರ್‌ ಅವರ ಕಳವಳಕ್ಕೆ ಇತರೆ ಹಲವು ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಕೂಡ ಧ್ವನಿಗೂಡಿಸಿದ್ದು, ಆಮಿಷವೊಡ್ಡಿ ನಡೆಸುವ ಇಂಥ ಮತಾಂತರ ತಡೆಗೆ ಕಠಿಣ ಕಾನೂನು ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ತಮ್ಮ ಹೊಸದುರ್ಗ ಕ್ಷೇತ್ರ ಒಂದರಲ್ಲೇ 15ರಿಂದ 20 ಸಾವಿರ ಮಂದಿಯನ್ನು ಮತಾಂತರಗೊಳಿಸಲಾಗಿದೆ. ನನ್ನ ತಾಯಿಗೆ ಹಿಂದೂ ಸಂಪ್ರದಾಯಗಳನ್ನು ತ್ಯಜಿಸುವಂತೆ ಬ್ರೈನ್‌ವಾಶ್‌ ಮಾಡಿದ್ದಾರೆ. ನಾಮ ತೆಗೆಯುವಂತೆ ಹಾಗೂ ಹಿಂದೂ ದೇವಾಲಯಗಳಿಗೆ ಹೋಗದಂತೆ ಕಟ್ಟಾಜ್ಞೆ ವಿಧಿಸುತ್ತಾರೆ. ಇದೀಗ ನಮ್ಮ ತಾಯಿಗೆ ಕುಂಕುಮ, ದೇವರ ಪೂಜೆ, ಪೂಜಾಸಾಮಗ್ರಿ ಎಂದರೆ ಆಗುವುದಿಲ್ಲ. ಸದಾ ಕ್ರಿಶ್ಚಿಯನ್‌ ಪ್ರಾರ್ಥನೆ, ಹಾಡು, ರಿಂಗ್‌ ಟೋನ್‌ ಸಹ ಅದೇ ಆಗಿದೆ. ಹೀಗಾಗಿ ಜನರ ಎದುರು ನಮಗೆ ಮುಜುಗರ ಉಂಟಾಗುತ್ತಿದೆ' ಎಂದು ಗೂಳಿಹಟ್ಟಿ ಶೇಖರ್ ಹೇಳಿಕೊಂಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!