ರಾಜ್ಯದಲ್ಲಿ ಹೆಚ್ಚುತ್ತಿದೆ ಮತಾಂತರ, ನನ್ನ ತಾಯಿಯನ್ನೂ ಬಿಟ್ಟಿಲ್ಲ! ಸದನದಲ್ಲಿ ಗೂಳಿಹಟ್ಟಿ ಗೋಳು!

ರಾಜ್ಯದಲ್ಲಿ ಹೆಚ್ಚುತ್ತಿದೆ ಮತಾಂತರ, ನನ್ನ ತಾಯಿಯನ್ನೂ ಬಿಟ್ಟಿಲ್ಲ! ಸದನದಲ್ಲಿ ಗೂಳಿಹಟ್ಟಿ ಗೋಳು!

Published : Sep 23, 2021, 01:43 PM ISTUpdated : Sep 23, 2021, 01:52 PM IST

ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಪ್ರಕ್ರಿಯೆ ಚಟುವಟಿಕೆ ವ್ಯಾಪಕವಾಗಿದ್ದು, ಸ್ವತಃ ತಮ್ಮ ತಾಯಿಯನ್ನೇ ಆಮಿಷವೊಡ್ಡಿ ಮತಾಂತರ ಮಾಡಲಾಗಿದೆ ಎಂದು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿಶೇಖರ್‌ ಅಳಲು ತೋಡಿಕೊಂಡಿದ್ದಾರೆ. 

ಬೆಂಗಳೂರು (ಸೆ. 23): ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಪ್ರಕ್ರಿಯೆ ಚಟುವಟಿಕೆ ವ್ಯಾಪಕವಾಗಿದ್ದು, ಸ್ವತಃ ತಮ್ಮ ತಾಯಿಯನ್ನೇ ಆಮಿಷವೊಡ್ಡಿ ಮತಾಂತರ ಮಾಡಲಾಗಿದೆ ಎಂದು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿಶೇಖರ್‌ ಅಳಲು ತೋಡಿಕೊಂಡ ಘಟನೆಗೆವಿಧಾನಸಭೆ ಸಾಕ್ಷಿಯಾಯಿತು. ಶೇಖರ್‌ ಅವರ ಕಳವಳಕ್ಕೆ ಇತರೆ ಹಲವು ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಕೂಡ ಧ್ವನಿಗೂಡಿಸಿದ್ದು, ಆಮಿಷವೊಡ್ಡಿ ನಡೆಸುವ ಇಂಥ ಮತಾಂತರ ತಡೆಗೆ ಕಠಿಣ ಕಾನೂನು ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ತಮ್ಮ ಹೊಸದುರ್ಗ ಕ್ಷೇತ್ರ ಒಂದರಲ್ಲೇ 15ರಿಂದ 20 ಸಾವಿರ ಮಂದಿಯನ್ನು ಮತಾಂತರಗೊಳಿಸಲಾಗಿದೆ. ನನ್ನ ತಾಯಿಗೆ ಹಿಂದೂ ಸಂಪ್ರದಾಯಗಳನ್ನು ತ್ಯಜಿಸುವಂತೆ ಬ್ರೈನ್‌ವಾಶ್‌ ಮಾಡಿದ್ದಾರೆ. ನಾಮ ತೆಗೆಯುವಂತೆ ಹಾಗೂ ಹಿಂದೂ ದೇವಾಲಯಗಳಿಗೆ ಹೋಗದಂತೆ ಕಟ್ಟಾಜ್ಞೆ ವಿಧಿಸುತ್ತಾರೆ. ಇದೀಗ ನಮ್ಮ ತಾಯಿಗೆ ಕುಂಕುಮ, ದೇವರ ಪೂಜೆ, ಪೂಜಾಸಾಮಗ್ರಿ ಎಂದರೆ ಆಗುವುದಿಲ್ಲ. ಸದಾ ಕ್ರಿಶ್ಚಿಯನ್‌ ಪ್ರಾರ್ಥನೆ, ಹಾಡು, ರಿಂಗ್‌ ಟೋನ್‌ ಸಹ ಅದೇ ಆಗಿದೆ. ಹೀಗಾಗಿ ಜನರ ಎದುರು ನಮಗೆ ಮುಜುಗರ ಉಂಟಾಗುತ್ತಿದೆ' ಎಂದು ಗೂಳಿಹಟ್ಟಿ ಶೇಖರ್ ಹೇಳಿಕೊಂಡಿದ್ದಾರೆ. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!