ಬಿಜೆಪಿ ವಿಜಯ ಸಂಕಲ್ಪ ಯಾತ್ರೆ: ರಾಜೀವ್ ಚಂದ್ರಶೇಖರ್ ಬೈಕ್ ರ್ಯಾಲಿ!

Mar 2, 2019, 6:27 PM IST

ಬೆಂಗಳೂರು(ಮಾ.02): ಲೋಕಸಭೆ ಚುನಾವಣೆಗೆ ರಾಜ್ಯ ಬಿಜೆಪಿ ಘಟಕ ಭರ್ಜರಿ ತಯಾರಿ ನಡೆಸಿದೆ. ಇಂದು ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಚಿಕ್ಕಪೇಟೆಯಿಂದ ಮಾಗಡಿ ರಸ್ತೆವರೆಗೆ ಬೈಕ್ ರ್ಯಾಲಿ ನಡೆಸಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲಾಯಿತು. ಬೈಕ್ ರ್ಯಾಲಿಯಲ್ಲಿ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್, ಸಂಸದ ಪಿಸಿ ಮೋಹನ್, ಬಿಜೆಪಿ ಯುವಮೋರ್ಚಾ ಪ್ರಧಾನ ಕಾಯದರ್ಶಿ ವಿಜಯೇಂದ್ರನ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ರಾಜೀವ್ ಚಂದ್ರಶೇಖರ್, ರಾಹುಲ್ ಗಾಂಧಿ ರಾಜಕಾರಣವನ್ನು ಹೀಗಳೆದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...