News Hour: ಖರ್ಗೆ ಕೋಟೆಯಲ್ಲಿ ‘ರಾಜೀನಾಮೆ’ ಸಮರ

News Hour: ಖರ್ಗೆ ಕೋಟೆಯಲ್ಲಿ ‘ರಾಜೀನಾಮೆ’ ಸಮರ

Published : Jan 04, 2025, 11:27 PM IST

ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತನ ಹೆಸರು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಗಾಂಧಿಗಿರಿ ಪ್ರತಿಭಟನೆ ನಡೆಸಿ ಬಿಜೆಪಿ ಕಾರ್ಯಕರ್ತರಿಗೆ ಎಳನೀರು, ಟೀ, ಕಾಫಿ ನೀಡಿ ಸ್ವಾಗತಿಸಿದರು.

ಬೆಂಗಳೂರು (ಜ.4): ಖರ್ಗೆ ಕೋಟೆ ಕಲಬುರಗಿಯಲ್ಲಿ ಬಿಜೆಪಿ ರಣಕಹಳೆ ಊದಿದೆ. ಪ್ರಿಯಾಂಕ್ ಖರ್ಗೆ ರಾಜೀನಾಮೆಗಾಗಿ ಮುತ್ತಿಗೆ ಹೈಡ್ರಾಮಾ­ ನಡೆದಿದೆ. ಕೇಸರಿಪಡೆ ಪ್ರತಿಭಟನಾ ಅಸ್ತ್ರಕ್ಕೆ ಕಾಂಗ್ರೆಸ್​ ಗಾಂಧಿಗಿರಿ ತಿರುಗೇಟು ನೀಡಿದೆ.

ಬೀದರ್​ ಗುತ್ತಿಗೆದಾರ ಸಚಿನ್​ ಆತ್ಮಹತ್ಯೆ ಪ್ರಕರಣವನ್ನೇ ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ.  ಸಚಿವ ಪ್ರಿಯಾಂಕ್ ಆಪ್ತನ ಹೆಸರು ಉಲ್ಲೇಖ ಮಾಡಿರೋ ಕಾರಣ ಬಿಜೆಪಿ ಖರ್ಗೆ ರಾಜೀನಾಮೆ ಪಟ್ಟು ಹಿಡಿದಿದೆ. ಆತ್ಮಹತ್ಯೆ ನಡೆದ ದಿನದಿಂದಲೂ ಈ ಕೇಸ್‌ಅನ್ನು ಸಿಬಿಐಗೆ ಕೊಡಿ ಎಂದು ಬಿಜೆಪಿ ಒತ್ತಾಯಿಸುತ್ತಲೇ ಇತ್ತು. ಜನವರಿ 4ರೊಳಗೆ ಸಿಬಿಐಗೆ ಕೊಡದಿದ್ರೆ ಪ್ರಿಯಾಂಕ್​ ಮನೆಗೆ ಮುತ್ತಿಗೆ ಹಾಕೋದಾಗಿ ಘೋಷಿಸಿತ್ತು. ಅದರಂತೆ ಇವತ್ತು ಕೇಸರಿ ಪಡೆ ಪ್ರಿಯಾಂಕ್​ ಕೋಟೆಗೆ ದಂಡೆತ್ತಿ ಹೋಗಿತ್ತು. 

ಸಚಿನ್ ಪಾಂಚಾಳ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ತನಿಖೆಗೆ ಮೊದಲೇ ಕ್ಲೀನ್ ಚಿಟ್ ಕೊಟ್ಟ ಸಚಿವ ಬೋಸರಾಜು!

ಕಲಬುರಗಿ ಐವಾನ್ ಎ ಶಾಹಿ ರಸ್ತೆಯಲ್ಲಿರುವ ಸಚಿವ ಖರ್ಗೆ ನಿವಾಸಕ್ಕೆ ಇಂದು ಖಾಕಿ ಭದ್ರಕೋಟೆಯಲ್ಲಿತ್ತು. ಖರ್ಗೆ ಬೆಂಬಲಿಗರು, ಮನೆ ಎದುರು ಬಿಜೆಪಿ ಗೂಂಡಾಗಿರಿ ವಿರುದ್ಧ ಕಾಂಗ್ರೆಸ್​ ಗಾಂಧಿಗಿರಿ ಪೋಸ್ಟರ್ ಹಾಕಿ ಕೌಂಟರ್ ಕೊಟ್ಟಿದ್ದಾರೆ. ಬಿಜೆಪಿ ನಾಯಕರು ಮುತ್ತಿಗೆ ಹಾಕಲು ಬಂದ್ರೆ ರೆಡ್​ ಕಾರ್ಪೆಟ್ ಹಾಕಿ ಸ್ವಾಗತ ಮಾಡ್ತೀವಿ, ಜೊತೆಗೆ ಎಳನೀರು, ಟೀ, ಕಾಫಿ, ತಂಪು ಪಾನೀಯ ವ್ಯವಸ್ಥೆ ಮಾಡಿದ್ದೇವೆ ಅಂತ ತಿರುಗೇಟು ಕೊಟ್ಟಿದ್ದರು.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more