News Hour: ಖರ್ಗೆ ಕೋಟೆಯಲ್ಲಿ ‘ರಾಜೀನಾಮೆ’ ಸಮರ

News Hour: ಖರ್ಗೆ ಕೋಟೆಯಲ್ಲಿ ‘ರಾಜೀನಾಮೆ’ ಸಮರ

Published : Jan 04, 2025, 11:27 PM IST

ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತನ ಹೆಸರು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಗಾಂಧಿಗಿರಿ ಪ್ರತಿಭಟನೆ ನಡೆಸಿ ಬಿಜೆಪಿ ಕಾರ್ಯಕರ್ತರಿಗೆ ಎಳನೀರು, ಟೀ, ಕಾಫಿ ನೀಡಿ ಸ್ವಾಗತಿಸಿದರು.

ಬೆಂಗಳೂರು (ಜ.4): ಖರ್ಗೆ ಕೋಟೆ ಕಲಬುರಗಿಯಲ್ಲಿ ಬಿಜೆಪಿ ರಣಕಹಳೆ ಊದಿದೆ. ಪ್ರಿಯಾಂಕ್ ಖರ್ಗೆ ರಾಜೀನಾಮೆಗಾಗಿ ಮುತ್ತಿಗೆ ಹೈಡ್ರಾಮಾ­ ನಡೆದಿದೆ. ಕೇಸರಿಪಡೆ ಪ್ರತಿಭಟನಾ ಅಸ್ತ್ರಕ್ಕೆ ಕಾಂಗ್ರೆಸ್​ ಗಾಂಧಿಗಿರಿ ತಿರುಗೇಟು ನೀಡಿದೆ.

ಬೀದರ್​ ಗುತ್ತಿಗೆದಾರ ಸಚಿನ್​ ಆತ್ಮಹತ್ಯೆ ಪ್ರಕರಣವನ್ನೇ ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ.  ಸಚಿವ ಪ್ರಿಯಾಂಕ್ ಆಪ್ತನ ಹೆಸರು ಉಲ್ಲೇಖ ಮಾಡಿರೋ ಕಾರಣ ಬಿಜೆಪಿ ಖರ್ಗೆ ರಾಜೀನಾಮೆ ಪಟ್ಟು ಹಿಡಿದಿದೆ. ಆತ್ಮಹತ್ಯೆ ನಡೆದ ದಿನದಿಂದಲೂ ಈ ಕೇಸ್‌ಅನ್ನು ಸಿಬಿಐಗೆ ಕೊಡಿ ಎಂದು ಬಿಜೆಪಿ ಒತ್ತಾಯಿಸುತ್ತಲೇ ಇತ್ತು. ಜನವರಿ 4ರೊಳಗೆ ಸಿಬಿಐಗೆ ಕೊಡದಿದ್ರೆ ಪ್ರಿಯಾಂಕ್​ ಮನೆಗೆ ಮುತ್ತಿಗೆ ಹಾಕೋದಾಗಿ ಘೋಷಿಸಿತ್ತು. ಅದರಂತೆ ಇವತ್ತು ಕೇಸರಿ ಪಡೆ ಪ್ರಿಯಾಂಕ್​ ಕೋಟೆಗೆ ದಂಡೆತ್ತಿ ಹೋಗಿತ್ತು. 

ಸಚಿನ್ ಪಾಂಚಾಳ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ತನಿಖೆಗೆ ಮೊದಲೇ ಕ್ಲೀನ್ ಚಿಟ್ ಕೊಟ್ಟ ಸಚಿವ ಬೋಸರಾಜು!

ಕಲಬುರಗಿ ಐವಾನ್ ಎ ಶಾಹಿ ರಸ್ತೆಯಲ್ಲಿರುವ ಸಚಿವ ಖರ್ಗೆ ನಿವಾಸಕ್ಕೆ ಇಂದು ಖಾಕಿ ಭದ್ರಕೋಟೆಯಲ್ಲಿತ್ತು. ಖರ್ಗೆ ಬೆಂಬಲಿಗರು, ಮನೆ ಎದುರು ಬಿಜೆಪಿ ಗೂಂಡಾಗಿರಿ ವಿರುದ್ಧ ಕಾಂಗ್ರೆಸ್​ ಗಾಂಧಿಗಿರಿ ಪೋಸ್ಟರ್ ಹಾಕಿ ಕೌಂಟರ್ ಕೊಟ್ಟಿದ್ದಾರೆ. ಬಿಜೆಪಿ ನಾಯಕರು ಮುತ್ತಿಗೆ ಹಾಕಲು ಬಂದ್ರೆ ರೆಡ್​ ಕಾರ್ಪೆಟ್ ಹಾಕಿ ಸ್ವಾಗತ ಮಾಡ್ತೀವಿ, ಜೊತೆಗೆ ಎಳನೀರು, ಟೀ, ಕಾಫಿ, ತಂಪು ಪಾನೀಯ ವ್ಯವಸ್ಥೆ ಮಾಡಿದ್ದೇವೆ ಅಂತ ತಿರುಗೇಟು ಕೊಟ್ಟಿದ್ದರು.
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more