News Hour: ಖರ್ಗೆ ಕೋಟೆಯಲ್ಲಿ ‘ರಾಜೀನಾಮೆ’ ಸಮರ

News Hour: ಖರ್ಗೆ ಕೋಟೆಯಲ್ಲಿ ‘ರಾಜೀನಾಮೆ’ ಸಮರ

Published : Jan 04, 2025, 11:27 PM IST

ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತನ ಹೆಸರು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಗಾಂಧಿಗಿರಿ ಪ್ರತಿಭಟನೆ ನಡೆಸಿ ಬಿಜೆಪಿ ಕಾರ್ಯಕರ್ತರಿಗೆ ಎಳನೀರು, ಟೀ, ಕಾಫಿ ನೀಡಿ ಸ್ವಾಗತಿಸಿದರು.

ಬೆಂಗಳೂರು (ಜ.4): ಖರ್ಗೆ ಕೋಟೆ ಕಲಬುರಗಿಯಲ್ಲಿ ಬಿಜೆಪಿ ರಣಕಹಳೆ ಊದಿದೆ. ಪ್ರಿಯಾಂಕ್ ಖರ್ಗೆ ರಾಜೀನಾಮೆಗಾಗಿ ಮುತ್ತಿಗೆ ಹೈಡ್ರಾಮಾ­ ನಡೆದಿದೆ. ಕೇಸರಿಪಡೆ ಪ್ರತಿಭಟನಾ ಅಸ್ತ್ರಕ್ಕೆ ಕಾಂಗ್ರೆಸ್​ ಗಾಂಧಿಗಿರಿ ತಿರುಗೇಟು ನೀಡಿದೆ.

ಬೀದರ್​ ಗುತ್ತಿಗೆದಾರ ಸಚಿನ್​ ಆತ್ಮಹತ್ಯೆ ಪ್ರಕರಣವನ್ನೇ ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ.  ಸಚಿವ ಪ್ರಿಯಾಂಕ್ ಆಪ್ತನ ಹೆಸರು ಉಲ್ಲೇಖ ಮಾಡಿರೋ ಕಾರಣ ಬಿಜೆಪಿ ಖರ್ಗೆ ರಾಜೀನಾಮೆ ಪಟ್ಟು ಹಿಡಿದಿದೆ. ಆತ್ಮಹತ್ಯೆ ನಡೆದ ದಿನದಿಂದಲೂ ಈ ಕೇಸ್‌ಅನ್ನು ಸಿಬಿಐಗೆ ಕೊಡಿ ಎಂದು ಬಿಜೆಪಿ ಒತ್ತಾಯಿಸುತ್ತಲೇ ಇತ್ತು. ಜನವರಿ 4ರೊಳಗೆ ಸಿಬಿಐಗೆ ಕೊಡದಿದ್ರೆ ಪ್ರಿಯಾಂಕ್​ ಮನೆಗೆ ಮುತ್ತಿಗೆ ಹಾಕೋದಾಗಿ ಘೋಷಿಸಿತ್ತು. ಅದರಂತೆ ಇವತ್ತು ಕೇಸರಿ ಪಡೆ ಪ್ರಿಯಾಂಕ್​ ಕೋಟೆಗೆ ದಂಡೆತ್ತಿ ಹೋಗಿತ್ತು. 

ಸಚಿನ್ ಪಾಂಚಾಳ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ತನಿಖೆಗೆ ಮೊದಲೇ ಕ್ಲೀನ್ ಚಿಟ್ ಕೊಟ್ಟ ಸಚಿವ ಬೋಸರಾಜು!

ಕಲಬುರಗಿ ಐವಾನ್ ಎ ಶಾಹಿ ರಸ್ತೆಯಲ್ಲಿರುವ ಸಚಿವ ಖರ್ಗೆ ನಿವಾಸಕ್ಕೆ ಇಂದು ಖಾಕಿ ಭದ್ರಕೋಟೆಯಲ್ಲಿತ್ತು. ಖರ್ಗೆ ಬೆಂಬಲಿಗರು, ಮನೆ ಎದುರು ಬಿಜೆಪಿ ಗೂಂಡಾಗಿರಿ ವಿರುದ್ಧ ಕಾಂಗ್ರೆಸ್​ ಗಾಂಧಿಗಿರಿ ಪೋಸ್ಟರ್ ಹಾಕಿ ಕೌಂಟರ್ ಕೊಟ್ಟಿದ್ದಾರೆ. ಬಿಜೆಪಿ ನಾಯಕರು ಮುತ್ತಿಗೆ ಹಾಕಲು ಬಂದ್ರೆ ರೆಡ್​ ಕಾರ್ಪೆಟ್ ಹಾಕಿ ಸ್ವಾಗತ ಮಾಡ್ತೀವಿ, ಜೊತೆಗೆ ಎಳನೀರು, ಟೀ, ಕಾಫಿ, ತಂಪು ಪಾನೀಯ ವ್ಯವಸ್ಥೆ ಮಾಡಿದ್ದೇವೆ ಅಂತ ತಿರುಗೇಟು ಕೊಟ್ಟಿದ್ದರು.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more