News Hour: ಖರ್ಗೆ ಕೋಟೆಯಲ್ಲಿ ‘ರಾಜೀನಾಮೆ’ ಸಮರ

News Hour: ಖರ್ಗೆ ಕೋಟೆಯಲ್ಲಿ ‘ರಾಜೀನಾಮೆ’ ಸಮರ

Published : Jan 04, 2025, 11:27 PM IST

ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತನ ಹೆಸರು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಗಾಂಧಿಗಿರಿ ಪ್ರತಿಭಟನೆ ನಡೆಸಿ ಬಿಜೆಪಿ ಕಾರ್ಯಕರ್ತರಿಗೆ ಎಳನೀರು, ಟೀ, ಕಾಫಿ ನೀಡಿ ಸ್ವಾಗತಿಸಿದರು.

ಬೆಂಗಳೂರು (ಜ.4): ಖರ್ಗೆ ಕೋಟೆ ಕಲಬುರಗಿಯಲ್ಲಿ ಬಿಜೆಪಿ ರಣಕಹಳೆ ಊದಿದೆ. ಪ್ರಿಯಾಂಕ್ ಖರ್ಗೆ ರಾಜೀನಾಮೆಗಾಗಿ ಮುತ್ತಿಗೆ ಹೈಡ್ರಾಮಾ­ ನಡೆದಿದೆ. ಕೇಸರಿಪಡೆ ಪ್ರತಿಭಟನಾ ಅಸ್ತ್ರಕ್ಕೆ ಕಾಂಗ್ರೆಸ್​ ಗಾಂಧಿಗಿರಿ ತಿರುಗೇಟು ನೀಡಿದೆ.

ಬೀದರ್​ ಗುತ್ತಿಗೆದಾರ ಸಚಿನ್​ ಆತ್ಮಹತ್ಯೆ ಪ್ರಕರಣವನ್ನೇ ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ.  ಸಚಿವ ಪ್ರಿಯಾಂಕ್ ಆಪ್ತನ ಹೆಸರು ಉಲ್ಲೇಖ ಮಾಡಿರೋ ಕಾರಣ ಬಿಜೆಪಿ ಖರ್ಗೆ ರಾಜೀನಾಮೆ ಪಟ್ಟು ಹಿಡಿದಿದೆ. ಆತ್ಮಹತ್ಯೆ ನಡೆದ ದಿನದಿಂದಲೂ ಈ ಕೇಸ್‌ಅನ್ನು ಸಿಬಿಐಗೆ ಕೊಡಿ ಎಂದು ಬಿಜೆಪಿ ಒತ್ತಾಯಿಸುತ್ತಲೇ ಇತ್ತು. ಜನವರಿ 4ರೊಳಗೆ ಸಿಬಿಐಗೆ ಕೊಡದಿದ್ರೆ ಪ್ರಿಯಾಂಕ್​ ಮನೆಗೆ ಮುತ್ತಿಗೆ ಹಾಕೋದಾಗಿ ಘೋಷಿಸಿತ್ತು. ಅದರಂತೆ ಇವತ್ತು ಕೇಸರಿ ಪಡೆ ಪ್ರಿಯಾಂಕ್​ ಕೋಟೆಗೆ ದಂಡೆತ್ತಿ ಹೋಗಿತ್ತು. 

ಸಚಿನ್ ಪಾಂಚಾಳ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ತನಿಖೆಗೆ ಮೊದಲೇ ಕ್ಲೀನ್ ಚಿಟ್ ಕೊಟ್ಟ ಸಚಿವ ಬೋಸರಾಜು!

ಕಲಬುರಗಿ ಐವಾನ್ ಎ ಶಾಹಿ ರಸ್ತೆಯಲ್ಲಿರುವ ಸಚಿವ ಖರ್ಗೆ ನಿವಾಸಕ್ಕೆ ಇಂದು ಖಾಕಿ ಭದ್ರಕೋಟೆಯಲ್ಲಿತ್ತು. ಖರ್ಗೆ ಬೆಂಬಲಿಗರು, ಮನೆ ಎದುರು ಬಿಜೆಪಿ ಗೂಂಡಾಗಿರಿ ವಿರುದ್ಧ ಕಾಂಗ್ರೆಸ್​ ಗಾಂಧಿಗಿರಿ ಪೋಸ್ಟರ್ ಹಾಕಿ ಕೌಂಟರ್ ಕೊಟ್ಟಿದ್ದಾರೆ. ಬಿಜೆಪಿ ನಾಯಕರು ಮುತ್ತಿಗೆ ಹಾಕಲು ಬಂದ್ರೆ ರೆಡ್​ ಕಾರ್ಪೆಟ್ ಹಾಕಿ ಸ್ವಾಗತ ಮಾಡ್ತೀವಿ, ಜೊತೆಗೆ ಎಳನೀರು, ಟೀ, ಕಾಫಿ, ತಂಪು ಪಾನೀಯ ವ್ಯವಸ್ಥೆ ಮಾಡಿದ್ದೇವೆ ಅಂತ ತಿರುಗೇಟು ಕೊಟ್ಟಿದ್ದರು.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more