ಕಬಡ್ಡಿ ಗಲಾಟೆಯಲ್ಲಿ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತರ ಮನೆಗೆ ವಿಜಯೇಂದ್ರ ಭೇಟಿ

Mar 16, 2021, 9:25 AM IST

ಶಿವಮೊಗ್ಗ (ಮಾ. 16): ಭದ್ರಾವತಿ ಕಬಡ್ಡಿ ಪಂದ್ಯಾವಳಿ ವೇಳೆ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತರ ಮನೆಗೆ ಬಿವೈ ವಿಜಯೇಂದ್ರ ಭೇಟಿ ನೀಡಿ, ಕಾರ್ಯಕರ್ತರಿಗೆ, ಅವರ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.  'ಭದ್ರಾವತಿಯಲ್ಲಿ ನಡೆಯುತ್ತಿರುವ ಗೂಂಡಾಗಿರಿಗೆ ಇತಿಶ್ರೀ ಹಾಡಬೇಕು. ನಮ್ಮ ನಡುವೆ ಇರುವ ಭಿನ್ನಾಭಿಪ್ರಾಯವನ್ನು ಬದಿಗೊತ್ತಿ, ಹೋರಾಟ ಮಾಡಿದರೆ ಗೂಂಡಾಗಿರಿಯನ್ನು ಮಟ್ಟ ಹಾಕಬಹುದು' ಎಂದರು.