ಕಾಂಗ್ರೆಸ್‌ ಗ್ಯಾರಂಟಿ ಬೆನ್ನಲ್ಲೇ BPL ಕಾರ್ಡ್‌ಗೆ ಹೆಚ್ಚಿದ ಬೇಡಿಕೆ: ಆಹಾರ ಇಲಾಖೆ ಕಚೇರಿಗೆ ಮುಗಿಬಿದ್ದ ಜನ

ಕಾಂಗ್ರೆಸ್‌ ಗ್ಯಾರಂಟಿ ಬೆನ್ನಲ್ಲೇ BPL ಕಾರ್ಡ್‌ಗೆ ಹೆಚ್ಚಿದ ಬೇಡಿಕೆ: ಆಹಾರ ಇಲಾಖೆ ಕಚೇರಿಗೆ ಮುಗಿಬಿದ್ದ ಜನ

Published : May 26, 2023, 11:54 AM IST

ರಾಜ್ಯದಲ್ಲಿ 2.87 ಲಕ್ಷ ಬಿಪಿಎಲ್ ಹಾಗೂ 46,576 ಎಪಿಎಲ್ ಕಾರ್ಡ್ ಸೇರಿದಂತೆ ಒಟ್ಟು 3.34 ಲಕ್ಷ ಕಾರ್ಡ್‌ಗೆ ಅರ್ಜಿಗಳು ಬಂದಿದ್ದು, ವಿಲೇವಾರಿಗೆ ಬಾಕಿ ಇದೆ. ಇಲ್ಲಿಯವರೆಗೂ ರಾಜ್ಯದಲ್ಲಿ 4 ಕೋಟಿ ಜನರಿಗೆ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹಂಚಿಕೆ ಆಗಿದೆ.

ಬೆಂಗಳೂರು (ಮೇ.26): ರಾಜ್ಯದಲ್ಲಿ ನೂತನ ಸರ್ಕಾರ ಬರುತ್ತಿದ್ದಂತೆ ಬಿಪಿಎಲ್ ಕಾರ್ಡ್‌ಗೆ ಎಲ್ಲಿಲ್ಲದ ಬೇಡಿಕೆ‌ ಶುರುವಾಗಿದೆ. ಇದಕ್ಕೆ ಕಾರಣ ಏನು ಅಂತಾ ಗೊತ್ತಾ? ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ. ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಧಿಕಾರಕ್ಕೇರಿದೆ. ಬಹುಮತದ ಸರ್ಕಾರ ಬರುತ್ತಿದೆ ಅನ್ನೋದು ಖಚಿತ ಆಗುತ್ತಿದ್ದಂತೆ ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸುವ ಜನರ ಸಂಖ್ಯೆ ಹೆಚ್ಚಾಗಿದೆ. ಬಿಪಿಎಲ್​ ಕಾರ್ಡಿಗೆ ಬೇಡಿಕೆ ಹೆಚ್ಚಾಗಲು ಕಾರಣ ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳು. 

ಕಾಂಗ್ರೆಸ್‌ ಸರ್ಕಾರದಲ್ಲಿ ಸ್ಕೀಂ ಪಡೆಯಲು ಬಿಪಿಎಲ್‌ ಕಾರ್ಡ್ ಮಾನದಂಡ ಎಂದು ಜನತೆ ಭಾವಿಸಿದ್ದು, ರಾಜ್ಯಾದ್ಯಂತ ಆಹಾರ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಕೆ ಮಾಡಲಾಗುತ್ತಿದೆ. ಕಳೆದ 2 ವಾರಗಳಿಂದ ಬಿಪಿಎಲ್‌ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸುವ ಜನರ ಸಂಖ್ಯೆ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 27 ಸಾವಿರದ 411 ಅರ್ಜಿ, ವಿಜಯಪುರದಲ್ಲಿ 17 ಸಾವಿರದ 228 ಅರ್ಜಿ, ಬೆಂಗಳೂರಿನಲ್ಲಿ 12 ಸಾವಿರದ 765 ಅರ್ಜಿ, ಬೀದರ್‌ ಜಿಲ್ಲೆಯಿಂದ 12 ಸಾವಿರದ 661 ಅರ್ಜಿ ಹಾಗು ರಾಯಚೂರಿನಿಂದ 12 ಸಾವಿರದ 498 ಅರ್ಜಿಗಳು ಸಲ್ಲಿಕೆ ಆಗಿವೆ. ಸದ್ಯ ರಾಜ್ಯದಲ್ಲಿ 2.87 ಲಕ್ಷ ಬಿಪಿಎಲ್ ಹಾಗೂ 46,576 ಎಪಿಎಲ್ ಕಾರ್ಡ್ ಸೇರಿದಂತೆ ಒಟ್ಟು 3.34 ಲಕ್ಷ ಕಾರ್ಡ್‌ಗೆ ಅರ್ಜಿಗಳು ಬಂದಿದ್ದು, ವಿಲೇವಾರಿಗೆ ಬಾಕಿ ಇದೆ. ಇಲ್ಲಿಯವರೆಗೂ ರಾಜ್ಯದಲ್ಲಿ 4 ಕೋಟಿ ಜನರಿಗೆ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹಂಚಿಕೆ ಆಗಿದೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more