ಕಾಂಗ್ರೆಸ್‌ ಗ್ಯಾರಂಟಿ ಬೆನ್ನಲ್ಲೇ BPL ಕಾರ್ಡ್‌ಗೆ ಹೆಚ್ಚಿದ ಬೇಡಿಕೆ: ಆಹಾರ ಇಲಾಖೆ ಕಚೇರಿಗೆ ಮುಗಿಬಿದ್ದ ಜನ

ಕಾಂಗ್ರೆಸ್‌ ಗ್ಯಾರಂಟಿ ಬೆನ್ನಲ್ಲೇ BPL ಕಾರ್ಡ್‌ಗೆ ಹೆಚ್ಚಿದ ಬೇಡಿಕೆ: ಆಹಾರ ಇಲಾಖೆ ಕಚೇರಿಗೆ ಮುಗಿಬಿದ್ದ ಜನ

Published : May 26, 2023, 11:54 AM IST

ರಾಜ್ಯದಲ್ಲಿ 2.87 ಲಕ್ಷ ಬಿಪಿಎಲ್ ಹಾಗೂ 46,576 ಎಪಿಎಲ್ ಕಾರ್ಡ್ ಸೇರಿದಂತೆ ಒಟ್ಟು 3.34 ಲಕ್ಷ ಕಾರ್ಡ್‌ಗೆ ಅರ್ಜಿಗಳು ಬಂದಿದ್ದು, ವಿಲೇವಾರಿಗೆ ಬಾಕಿ ಇದೆ. ಇಲ್ಲಿಯವರೆಗೂ ರಾಜ್ಯದಲ್ಲಿ 4 ಕೋಟಿ ಜನರಿಗೆ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹಂಚಿಕೆ ಆಗಿದೆ.

ಬೆಂಗಳೂರು (ಮೇ.26): ರಾಜ್ಯದಲ್ಲಿ ನೂತನ ಸರ್ಕಾರ ಬರುತ್ತಿದ್ದಂತೆ ಬಿಪಿಎಲ್ ಕಾರ್ಡ್‌ಗೆ ಎಲ್ಲಿಲ್ಲದ ಬೇಡಿಕೆ‌ ಶುರುವಾಗಿದೆ. ಇದಕ್ಕೆ ಕಾರಣ ಏನು ಅಂತಾ ಗೊತ್ತಾ? ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ. ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಧಿಕಾರಕ್ಕೇರಿದೆ. ಬಹುಮತದ ಸರ್ಕಾರ ಬರುತ್ತಿದೆ ಅನ್ನೋದು ಖಚಿತ ಆಗುತ್ತಿದ್ದಂತೆ ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸುವ ಜನರ ಸಂಖ್ಯೆ ಹೆಚ್ಚಾಗಿದೆ. ಬಿಪಿಎಲ್​ ಕಾರ್ಡಿಗೆ ಬೇಡಿಕೆ ಹೆಚ್ಚಾಗಲು ಕಾರಣ ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳು. 

ಕಾಂಗ್ರೆಸ್‌ ಸರ್ಕಾರದಲ್ಲಿ ಸ್ಕೀಂ ಪಡೆಯಲು ಬಿಪಿಎಲ್‌ ಕಾರ್ಡ್ ಮಾನದಂಡ ಎಂದು ಜನತೆ ಭಾವಿಸಿದ್ದು, ರಾಜ್ಯಾದ್ಯಂತ ಆಹಾರ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಕೆ ಮಾಡಲಾಗುತ್ತಿದೆ. ಕಳೆದ 2 ವಾರಗಳಿಂದ ಬಿಪಿಎಲ್‌ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸುವ ಜನರ ಸಂಖ್ಯೆ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 27 ಸಾವಿರದ 411 ಅರ್ಜಿ, ವಿಜಯಪುರದಲ್ಲಿ 17 ಸಾವಿರದ 228 ಅರ್ಜಿ, ಬೆಂಗಳೂರಿನಲ್ಲಿ 12 ಸಾವಿರದ 765 ಅರ್ಜಿ, ಬೀದರ್‌ ಜಿಲ್ಲೆಯಿಂದ 12 ಸಾವಿರದ 661 ಅರ್ಜಿ ಹಾಗು ರಾಯಚೂರಿನಿಂದ 12 ಸಾವಿರದ 498 ಅರ್ಜಿಗಳು ಸಲ್ಲಿಕೆ ಆಗಿವೆ. ಸದ್ಯ ರಾಜ್ಯದಲ್ಲಿ 2.87 ಲಕ್ಷ ಬಿಪಿಎಲ್ ಹಾಗೂ 46,576 ಎಪಿಎಲ್ ಕಾರ್ಡ್ ಸೇರಿದಂತೆ ಒಟ್ಟು 3.34 ಲಕ್ಷ ಕಾರ್ಡ್‌ಗೆ ಅರ್ಜಿಗಳು ಬಂದಿದ್ದು, ವಿಲೇವಾರಿಗೆ ಬಾಕಿ ಇದೆ. ಇಲ್ಲಿಯವರೆಗೂ ರಾಜ್ಯದಲ್ಲಿ 4 ಕೋಟಿ ಜನರಿಗೆ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹಂಚಿಕೆ ಆಗಿದೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more