ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹ: ಅ. 21 ರಂದು ಸಿಎಂ ಬಿಎಸ್‌ವೈ ವೈಮಾನಿಕ ಸಮೀಕ್ಷೆ

Oct 18, 2020, 3:37 PM IST

ಬೆಂಗಳೂರು(ಅ.18): ವರುಣನ ಅವಕೃಪೆಯಿಂದ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಭೀಕರ ಪ್ರವಾಹದಿಂದ ಜನರ ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅ. 21 ರಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಉತ್ತರ ಕರ್ನಾಟಕದ 10 ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. 

ಭೀಮಾ ನದಿ ಪ್ರವಾಹಕ್ಕೆ ನಲುಗಿದ ಉತ್ತರ ಕರ್ನಾಟಕ: ಸಂತ್ರಸ್ತರ ರಕ್ಷಣೆಗೆ ಅರೆಸೇನಾ ಪಡೆ

ಕಳೆದ ಕೆಲವು ದಿನಗಳಿಂದ ಸುರಿದ ಭಾ ರೀ ಮಳೆಯಿಂದಾಗಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭೀಕರ ಪ್ರವಾಹ ಎದುರಾಗಿತ್ತು. ಹೀಗಾಗಿ ಸಿಎಂ ವೈಮಾನಿಕ ಸಮೀಕ್ಷೆ ನಡೆಸಲು ನಿರ್ಧರಿಸಿದ್ದಾರೆ.