ವಿದ್ಯುತ್‌, ಮದ್ಯ, ಹಾಲಷ್ಟೇ ಅಲ್ಲ, ನೀರಿನ ದರವೂ ಹೆಚ್ಚಳ?

ವಿದ್ಯುತ್‌, ಮದ್ಯ, ಹಾಲಷ್ಟೇ ಅಲ್ಲ, ನೀರಿನ ದರವೂ ಹೆಚ್ಚಳ?

Published : Jun 08, 2023, 10:20 AM IST

ವಿದ್ಯುತ್‌, ಮದ್ಯ, ಹಾಲಿನ ದರಗಳು ಹೆಚ್ಚಳ ಮಾಡುವ ಬಗ್ಗೆ ಪ್ರಸ್ತಾವನೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ನೀರಿನ ದರವೂ ಹೆಚ್ಚಳ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. 

ಬೆಂಗಳೂರು (ಜೂ.08): ವಿದ್ಯುತ್‌, ಮದ್ಯ, ಹಾಲಿನ ದರಗಳು ಹೆಚ್ಚಳ ಮಾಡುವ ಬಗ್ಗೆ ಪ್ರಸ್ತಾವನೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ನೀರಿನ ದರವೂ ಹೆಚ್ಚಳ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. ಈ ಏರಿಕೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶೀಘ್ರದಲ್ಲಿ ಈ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ಜಲಮಂಡಳಿ ಅಧಿಕಾರಿಗಳೊಂದಿಗೆ ಮಂಗಳವಾರ ಜಲಮಂಡಳಿ ಕೇಂದ್ರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯ ಬೆಂಗಳೂರು ಜಲಮಂಡಳಿಯ ಸ್ಥಿತಿ ಚಿಂತಾಜನಕವಾಗಿದೆ. 2014ರಿಂದ ಈವರೆಗೆ ನೀರು ಬಳಕೆ ಶುಲ್ಕ ಹೆಚ್ಚಳ ಮಾಡಿಲ್ಲ. 

ಹೀಗಾಗಿ ಜಲಮಂಡಳಿ ಆದಾಯ ತೀರಾ ಕಡಿಮೆಯಿದ್ದು, ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೀಗಾಗಿ ನೀರಿನ ಶುಲ್ಕ ಹೆಚ್ಚಳ ಸೇರಿ ಜಲಮಂಡಳಿಯನ್ನು ಆರ್ಥಿಕವಾಗಿ ಸಬಲಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಜಲಮಂಡಳಿ ಬಳಿ ಸಿಬ್ಬಂದಿ, ಅಧಿಕಾರಿಗಳಿಗೆ ವೇತನ ನೀಡಲೂ ಹಣವಿಲ್ಲದಂತಾಗಿದೆ. ಜಲಮಂಡಳಿ ಕಾರ್ಯದ ಬಗ್ಗೆ ಸೂಚನೆ ನೀಡಲು ಬಂದಿದ್ದ ನನಗೆ ಅವರ ಗೋಳು ಕೇಳುವಂತಾಯಿತು. ಬೆಸ್ಕಾಂನಿಂದ ರಿಯಾಯಿತಿ ದರದಲ್ಲಿ ಜಲಮಂಡಳಿಗೆ ವಿದ್ಯುತ್‌ ಪೂರೈಸಲಾಗುತ್ತಿದೆ. ಆದರೆ, ಜಲಮಂಡಳಿಗೆ ವಾರ್ಷಿಕ 104 ಕೋಟಿ ಆದಾಯ ಬಂದರೆ 95 ಕೋಟಿ ವಿದ್ಯುತ್‌ ಬಿಲ್‌ ಪಾವತಿಗೇ ವ್ಯಯಿಸಬೇಕಾದ ಪರಿಸ್ಥಿತಿಯಿದೆ. ಇದರಿಂದಾಗಿ ಬೃಹತ್‌ ಯೋಜನೆಗಳೆಲ್ಲವನ್ನೂ ಸಾಲ ಪಡೆದೇ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more