ವಿದ್ಯುತ್‌, ಮದ್ಯ, ಹಾಲಷ್ಟೇ ಅಲ್ಲ, ನೀರಿನ ದರವೂ ಹೆಚ್ಚಳ?

ವಿದ್ಯುತ್‌, ಮದ್ಯ, ಹಾಲಷ್ಟೇ ಅಲ್ಲ, ನೀರಿನ ದರವೂ ಹೆಚ್ಚಳ?

Published : Jun 08, 2023, 10:20 AM IST

ವಿದ್ಯುತ್‌, ಮದ್ಯ, ಹಾಲಿನ ದರಗಳು ಹೆಚ್ಚಳ ಮಾಡುವ ಬಗ್ಗೆ ಪ್ರಸ್ತಾವನೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ನೀರಿನ ದರವೂ ಹೆಚ್ಚಳ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. 

ಬೆಂಗಳೂರು (ಜೂ.08): ವಿದ್ಯುತ್‌, ಮದ್ಯ, ಹಾಲಿನ ದರಗಳು ಹೆಚ್ಚಳ ಮಾಡುವ ಬಗ್ಗೆ ಪ್ರಸ್ತಾವನೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ನೀರಿನ ದರವೂ ಹೆಚ್ಚಳ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. ಈ ಏರಿಕೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶೀಘ್ರದಲ್ಲಿ ಈ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ಜಲಮಂಡಳಿ ಅಧಿಕಾರಿಗಳೊಂದಿಗೆ ಮಂಗಳವಾರ ಜಲಮಂಡಳಿ ಕೇಂದ್ರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯ ಬೆಂಗಳೂರು ಜಲಮಂಡಳಿಯ ಸ್ಥಿತಿ ಚಿಂತಾಜನಕವಾಗಿದೆ. 2014ರಿಂದ ಈವರೆಗೆ ನೀರು ಬಳಕೆ ಶುಲ್ಕ ಹೆಚ್ಚಳ ಮಾಡಿಲ್ಲ. 

ಹೀಗಾಗಿ ಜಲಮಂಡಳಿ ಆದಾಯ ತೀರಾ ಕಡಿಮೆಯಿದ್ದು, ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೀಗಾಗಿ ನೀರಿನ ಶುಲ್ಕ ಹೆಚ್ಚಳ ಸೇರಿ ಜಲಮಂಡಳಿಯನ್ನು ಆರ್ಥಿಕವಾಗಿ ಸಬಲಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಜಲಮಂಡಳಿ ಬಳಿ ಸಿಬ್ಬಂದಿ, ಅಧಿಕಾರಿಗಳಿಗೆ ವೇತನ ನೀಡಲೂ ಹಣವಿಲ್ಲದಂತಾಗಿದೆ. ಜಲಮಂಡಳಿ ಕಾರ್ಯದ ಬಗ್ಗೆ ಸೂಚನೆ ನೀಡಲು ಬಂದಿದ್ದ ನನಗೆ ಅವರ ಗೋಳು ಕೇಳುವಂತಾಯಿತು. ಬೆಸ್ಕಾಂನಿಂದ ರಿಯಾಯಿತಿ ದರದಲ್ಲಿ ಜಲಮಂಡಳಿಗೆ ವಿದ್ಯುತ್‌ ಪೂರೈಸಲಾಗುತ್ತಿದೆ. ಆದರೆ, ಜಲಮಂಡಳಿಗೆ ವಾರ್ಷಿಕ 104 ಕೋಟಿ ಆದಾಯ ಬಂದರೆ 95 ಕೋಟಿ ವಿದ್ಯುತ್‌ ಬಿಲ್‌ ಪಾವತಿಗೇ ವ್ಯಯಿಸಬೇಕಾದ ಪರಿಸ್ಥಿತಿಯಿದೆ. ಇದರಿಂದಾಗಿ ಬೃಹತ್‌ ಯೋಜನೆಗಳೆಲ್ಲವನ್ನೂ ಸಾಲ ಪಡೆದೇ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more