ವಿದ್ಯುತ್‌, ಮದ್ಯ, ಹಾಲಷ್ಟೇ ಅಲ್ಲ, ನೀರಿನ ದರವೂ ಹೆಚ್ಚಳ?

ವಿದ್ಯುತ್‌, ಮದ್ಯ, ಹಾಲಷ್ಟೇ ಅಲ್ಲ, ನೀರಿನ ದರವೂ ಹೆಚ್ಚಳ?

Published : Jun 08, 2023, 10:20 AM IST

ವಿದ್ಯುತ್‌, ಮದ್ಯ, ಹಾಲಿನ ದರಗಳು ಹೆಚ್ಚಳ ಮಾಡುವ ಬಗ್ಗೆ ಪ್ರಸ್ತಾವನೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ನೀರಿನ ದರವೂ ಹೆಚ್ಚಳ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. 

ಬೆಂಗಳೂರು (ಜೂ.08): ವಿದ್ಯುತ್‌, ಮದ್ಯ, ಹಾಲಿನ ದರಗಳು ಹೆಚ್ಚಳ ಮಾಡುವ ಬಗ್ಗೆ ಪ್ರಸ್ತಾವನೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ನೀರಿನ ದರವೂ ಹೆಚ್ಚಳ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. ಈ ಏರಿಕೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶೀಘ್ರದಲ್ಲಿ ಈ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ಜಲಮಂಡಳಿ ಅಧಿಕಾರಿಗಳೊಂದಿಗೆ ಮಂಗಳವಾರ ಜಲಮಂಡಳಿ ಕೇಂದ್ರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯ ಬೆಂಗಳೂರು ಜಲಮಂಡಳಿಯ ಸ್ಥಿತಿ ಚಿಂತಾಜನಕವಾಗಿದೆ. 2014ರಿಂದ ಈವರೆಗೆ ನೀರು ಬಳಕೆ ಶುಲ್ಕ ಹೆಚ್ಚಳ ಮಾಡಿಲ್ಲ. 

ಹೀಗಾಗಿ ಜಲಮಂಡಳಿ ಆದಾಯ ತೀರಾ ಕಡಿಮೆಯಿದ್ದು, ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೀಗಾಗಿ ನೀರಿನ ಶುಲ್ಕ ಹೆಚ್ಚಳ ಸೇರಿ ಜಲಮಂಡಳಿಯನ್ನು ಆರ್ಥಿಕವಾಗಿ ಸಬಲಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಜಲಮಂಡಳಿ ಬಳಿ ಸಿಬ್ಬಂದಿ, ಅಧಿಕಾರಿಗಳಿಗೆ ವೇತನ ನೀಡಲೂ ಹಣವಿಲ್ಲದಂತಾಗಿದೆ. ಜಲಮಂಡಳಿ ಕಾರ್ಯದ ಬಗ್ಗೆ ಸೂಚನೆ ನೀಡಲು ಬಂದಿದ್ದ ನನಗೆ ಅವರ ಗೋಳು ಕೇಳುವಂತಾಯಿತು. ಬೆಸ್ಕಾಂನಿಂದ ರಿಯಾಯಿತಿ ದರದಲ್ಲಿ ಜಲಮಂಡಳಿಗೆ ವಿದ್ಯುತ್‌ ಪೂರೈಸಲಾಗುತ್ತಿದೆ. ಆದರೆ, ಜಲಮಂಡಳಿಗೆ ವಾರ್ಷಿಕ 104 ಕೋಟಿ ಆದಾಯ ಬಂದರೆ 95 ಕೋಟಿ ವಿದ್ಯುತ್‌ ಬಿಲ್‌ ಪಾವತಿಗೇ ವ್ಯಯಿಸಬೇಕಾದ ಪರಿಸ್ಥಿತಿಯಿದೆ. ಇದರಿಂದಾಗಿ ಬೃಹತ್‌ ಯೋಜನೆಗಳೆಲ್ಲವನ್ನೂ ಸಾಲ ಪಡೆದೇ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more