ವಿದ್ಯುತ್‌, ಮದ್ಯ, ಹಾಲಷ್ಟೇ ಅಲ್ಲ, ನೀರಿನ ದರವೂ ಹೆಚ್ಚಳ?

ವಿದ್ಯುತ್‌, ಮದ್ಯ, ಹಾಲಷ್ಟೇ ಅಲ್ಲ, ನೀರಿನ ದರವೂ ಹೆಚ್ಚಳ?

Published : Jun 08, 2023, 10:20 AM IST

ವಿದ್ಯುತ್‌, ಮದ್ಯ, ಹಾಲಿನ ದರಗಳು ಹೆಚ್ಚಳ ಮಾಡುವ ಬಗ್ಗೆ ಪ್ರಸ್ತಾವನೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ನೀರಿನ ದರವೂ ಹೆಚ್ಚಳ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. 

ಬೆಂಗಳೂರು (ಜೂ.08): ವಿದ್ಯುತ್‌, ಮದ್ಯ, ಹಾಲಿನ ದರಗಳು ಹೆಚ್ಚಳ ಮಾಡುವ ಬಗ್ಗೆ ಪ್ರಸ್ತಾವನೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ನೀರಿನ ದರವೂ ಹೆಚ್ಚಳ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. ಈ ಏರಿಕೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶೀಘ್ರದಲ್ಲಿ ಈ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ಜಲಮಂಡಳಿ ಅಧಿಕಾರಿಗಳೊಂದಿಗೆ ಮಂಗಳವಾರ ಜಲಮಂಡಳಿ ಕೇಂದ್ರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯ ಬೆಂಗಳೂರು ಜಲಮಂಡಳಿಯ ಸ್ಥಿತಿ ಚಿಂತಾಜನಕವಾಗಿದೆ. 2014ರಿಂದ ಈವರೆಗೆ ನೀರು ಬಳಕೆ ಶುಲ್ಕ ಹೆಚ್ಚಳ ಮಾಡಿಲ್ಲ. 

ಹೀಗಾಗಿ ಜಲಮಂಡಳಿ ಆದಾಯ ತೀರಾ ಕಡಿಮೆಯಿದ್ದು, ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೀಗಾಗಿ ನೀರಿನ ಶುಲ್ಕ ಹೆಚ್ಚಳ ಸೇರಿ ಜಲಮಂಡಳಿಯನ್ನು ಆರ್ಥಿಕವಾಗಿ ಸಬಲಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಜಲಮಂಡಳಿ ಬಳಿ ಸಿಬ್ಬಂದಿ, ಅಧಿಕಾರಿಗಳಿಗೆ ವೇತನ ನೀಡಲೂ ಹಣವಿಲ್ಲದಂತಾಗಿದೆ. ಜಲಮಂಡಳಿ ಕಾರ್ಯದ ಬಗ್ಗೆ ಸೂಚನೆ ನೀಡಲು ಬಂದಿದ್ದ ನನಗೆ ಅವರ ಗೋಳು ಕೇಳುವಂತಾಯಿತು. ಬೆಸ್ಕಾಂನಿಂದ ರಿಯಾಯಿತಿ ದರದಲ್ಲಿ ಜಲಮಂಡಳಿಗೆ ವಿದ್ಯುತ್‌ ಪೂರೈಸಲಾಗುತ್ತಿದೆ. ಆದರೆ, ಜಲಮಂಡಳಿಗೆ ವಾರ್ಷಿಕ 104 ಕೋಟಿ ಆದಾಯ ಬಂದರೆ 95 ಕೋಟಿ ವಿದ್ಯುತ್‌ ಬಿಲ್‌ ಪಾವತಿಗೇ ವ್ಯಯಿಸಬೇಕಾದ ಪರಿಸ್ಥಿತಿಯಿದೆ. ಇದರಿಂದಾಗಿ ಬೃಹತ್‌ ಯೋಜನೆಗಳೆಲ್ಲವನ್ನೂ ಸಾಲ ಪಡೆದೇ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more