Jun 24, 2020, 2:44 PM IST
ಬೆಂಗಳೂರು(ಜೂ.24): ಗುರುವಾರ(ಜೂ.25) ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಲಾಕ್ಡೌನ್ ಜಾರಿಯ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿ ಲಾಕ್ಡೌನ್ ಮಾಡುವ ಕುರಿತಂತೆ ಸಾಕಷ್ಟು ಪರ-ವಿರೋಧ ವ್ಯಕ್ತವಾಗಿದ್ದು, ಗುರುವಾರ ನಡೆಯುವ ಸಭೆ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ.
ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಮಾತ್ರ ಸೀಲ್ಡೌನ್ ಸಾಕು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಇದರ ನಡುವೆ ಮೆಟ್ರೋ ಸಂಚಾರ ಆರಂಭಿಸುವ ಕುರಿತಂತೆಯೂ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಪ್ರಯಾಣಿಕರ ಗಮನಕ್ಕೆ: ಮಹತ್ವದ ಪ್ರಕಟಣೆ ಹೊರಡಿಸಿದ ಕೆಎಸ್ಆರ್ಟಿಸಿ..!
ಸಂಚಾರ ವ್ಯವಸ್ಥೆಗೆ ಈಗಾಗಲೇ BMTC, KSRTC ಬಸ್ ಬಿಡಲಾಗಿದೆ. ಹೀಗಿದ್ದು ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಹೀಗಿರುವಾಗ ಮೆಟ್ರೋ ಸಂಚಾರ ಆರಂಭಿಸುವುದು ಬೇಡ ಎಂದು ಕೆಲವು ಸಚಿವರು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಏನೆಲ್ಲಾ ಚರ್ಚೆಯಾಗಲಿದೆ ಎನ್ನುವುದರ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ ನೋಡಿ.