ಈ ಮೊದಲು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಕ್ರಾಂತಿ ಬಳಿಕ ಸಚಿವ ಸಂಪುಟ ಪುನಾರಚನೆಯ ಸುಳಿವು ನೀಡಿದ್ದರು. ಆದರೆ ಇದೀಗ ಪಂಚರಾಜ್ಯಗಳ ಚುನಾವಣೆವರೆಗೂ ಸಚಿವ ಸಂಪುಟ ಪುನಾರಚನೆ ಅನುಮಾನ ಎನಿಸಿದೆ.
ಬೆಂಗಳೂರು(ಜ.20): ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟದ ಪುನಾರಚನೆಯ (Cabinet Reshuffle) ಕುರಿತಂತೆ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಇದರ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಆಸೆ ಗರಿಗೆದರಿದೆ. ಇನ್ನು ಹೈಕಮಾಂಡ್ ಕೂಡಾ ಪುನಾರಚನೆಗೆ ಗ್ರೀನ್ ಸಿಗ್ನಲ್ ಕೊಡುವ ನಿರೀಕ್ಷೆಯಿದ್ದು, ಇದೀಗ ಬಿಜೆಪಿ (BJP) ಪಾಳಯದಲ್ಲಿ ಸಚಿವಾಕಾಂಕ್ಷಿಗಳ ಸರ್ಕಸ್ ಜೋರಾಗಿದೆ.
ಈ ಮೊದಲು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಸಂಕ್ರಾಂತಿ ಬಳಿಕ ಸಚಿವ ಸಂಪುಟ ಪುನಾರಚನೆಯ ಸುಳಿವು ನೀಡಿದ್ದರು. ಆದರೆ ಇದೀಗ ಪಂಚರಾಜ್ಯಗಳ ಚುನಾವಣೆವರೆಗೂ ಸಚಿವ ಸಂಪುಟ ಪುನಾರಚನೆ ಅನುಮಾನ ಎನಿಸಿದೆ.
ಕಳೆದ ಎರಡು ಅವಧಿಯಲ್ಲಿ ಮಂತ್ರಿ ಆದವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಡ ಜೋರಾಗಿದೆ. ಇನ್ನು ಕೊನೆಯ ಒಂದು ವರ್ಷದ ಅವಧಿಗೆ ಹೊಸಬರಿಗೆ ಅವಕಾಶ ನೀಡಲು ಆಗ್ರಹ ಕೇಳಿಬಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.