ಕಾಫಿ ಡೇ ಸಿದ್ಧಾರ್ಥ್‌ಗೆ ಮುಳುವಾಗಿದ್ದೇ ಈ ವ್ಯವಹಾರವಾ? ಆಂತರಿಕ ತನಿಖೆಯಿಂದ ಬಯಲಾದ ಅಂಶಗಳು

ಕಾಫಿ ಡೇ ಸಿದ್ಧಾರ್ಥ್‌ಗೆ ಮುಳುವಾಗಿದ್ದೇ ಈ ವ್ಯವಹಾರವಾ? ಆಂತರಿಕ ತನಿಖೆಯಿಂದ ಬಯಲಾದ ಅಂಶಗಳು

Suvarna News   | Asianet News
Published : Jul 25, 2020, 11:01 AM ISTUpdated : Jul 25, 2020, 11:52 AM IST

ಖ್ಯಾತ ಉದ್ಯಮಿ, ಕಾಫೀ ಡೇ ಸಮೂಹದ ಮಾಲೀಕ ವಿ.ಜಿ.ಸಿದ್ಧಾರ್ಥ ಅವರ ಸಾವಿಗೆ ಕಾರಣವಾದ ಸನ್ನಿವೇಶಗಳ ಕುರಿತು ತನಿಖೆ ನಡೆಸಿದ್ದ ಸಿಬಿಐನ ನಿವೃತ್ತ ನಿರ್ದೇಶಕ ಅಶೋಕ್‌ ಕುಮಾರ್‌ ಮಲ್ಹೋತ್ರಾ ನೇತೃತ್ವದ ಸಮಿತಿ, ಸಿದ್ಧಾರ್ಥ ಅವರು ಕಾಫೀಡೇನಿಂದ ಸುಮಾರು 3535 ಕೋಟಿ ರು.ಗಳನ್ನು ತಮ್ಮ ಸ್ವಂತ ಕಂಪನಿಗಳಿಗೆ ವರ್ಗಾಯಿಸಿದ್ದನ್ನು ಕಂಡುಕೊಂಡಿದೆ. ಅಲ್ಲದೆ ಸಿದ್ಧಾರ್ಥ ಅವರಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಷಯದಲ್ಲಿ ಆದಾಯ ತೆರಿಗೆ ಇಲಾಖೆಗೆ ಕ್ಲೀನ್‌ಚಿಟ್‌ ನೀಡಿದೆ.

ಬೆಂಗಳೂರು (ಜು. 25): ಖ್ಯಾತ ಉದ್ಯಮಿ, ಕಾಫೀ ಡೇ ಸಮೂಹದ ಮಾಲೀಕ ವಿ.ಜಿ.ಸಿದ್ಧಾರ್ಥ ಅವರ ಸಾವಿಗೆ ಕಾರಣವಾದ ಸನ್ನಿವೇಶಗಳ ಕುರಿತು ತನಿಖೆ ನಡೆಸಿದ್ದ ಸಿಬಿಐನ ನಿವೃತ್ತ ನಿರ್ದೇಶಕ ಅಶೋಕ್‌ ಕುಮಾರ್‌ ಮಲ್ಹೋತ್ರಾ ನೇತೃತ್ವದ ಸಮಿತಿ, ಸಿದ್ಧಾರ್ಥ ಅವರು ಕಾಫೀಡೇನಿಂದ ಸುಮಾರು 3535 ಕೋಟಿ ರು.ಗಳನ್ನು ತಮ್ಮ ಸ್ವಂತ ಕಂಪನಿಗಳಿಗೆ ವರ್ಗಾಯಿಸಿದ್ದನ್ನು ಕಂಡುಕೊಂಡಿದೆ. ಅಲ್ಲದೆ ಸಿದ್ಧಾರ್ಥ ಅವರಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಷಯದಲ್ಲಿ ಆದಾಯ ತೆರಿಗೆ ಇಲಾಖೆಗೆ ಕ್ಲೀನ್‌ಚಿಟ್‌ ನೀಡಿದೆ.

ಸಿದ್ದಾರ್ಥ ಅವರ ಸ್ವಂತ ಕಂಪನಿಯಾದ ಎಂಎಸಿಇಎಲ್‌, ಸಿಡಿಇಎಲ್‌ನ 49 ಸಹ ಸಂಸ್ಥೆಗಳ ಜೊತೆ ಹಣಕಾಸು ವ್ಯವಹಾರ ಹೊಂದಿತ್ತು. ಸಿಡಿಇಎಲ್‌ನ ವಿವಿಧ ಕಂಪನಿಗಳಿಂದ ಎಂಎಸಿಇಲ್‌ ಮುಂಗಣ ಹಣ ಪಡೆದುಕೊಂಡಿತ್ತು. ಈ ಎಲ್ಲಾ ವ್ಯವಹಾರಗಳು ಸಾಮಾನ್ಯ ಬ್ಯಾಂಕಿಂಗ್‌ ವಹಿವಾಟಿನ ಸ್ವರೂಪದಲ್ಲೇ ನಡೆದಿತ್ತು. ಹೀಗೆ ಪಡೆದ ಬಹುತೇಕ ಹಣವನ್ನು ಪಿಇ ಹೂಡಿಕೆದಾರರಿಂದ ಷೇರು ಮರುಖರೀದಿಗೆ, ಸಾಲ ಮರುಪಾವತಿಗೆ, ಬಡ್ಡಿ ಪಾವತಿಗೆ, ಇತರೆ ಕೆಲ ಖಾಸಗಿ ಹೂಡಿಕೆಗೆ ಬಳಸಿರುವ ಸಾಧ್ಯತೆ ಇದೆ ಎಂದು ಸಮಿತಿ ಹೇಳಿದೆ.

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್