ಹಲಾಲ್, ಜಟ್ಕಾ ಬಳಿಕ ಈಗ ಹಿಂದೂ ಸಂಘಟನೆಗಳಿಂದ ಅಕ್ಷಯ ತೃತೀಯ ಅಭಿಯಾನ!

ಹಲಾಲ್, ಜಟ್ಕಾ ಬಳಿಕ ಈಗ ಹಿಂದೂ ಸಂಘಟನೆಗಳಿಂದ ಅಕ್ಷಯ ತೃತೀಯ ಅಭಿಯಾನ!

Published : Apr 24, 2022, 07:44 PM IST

ಹಲಾಲ್ ಹಾಗೂ ವ್ಯಾಪಾರದ ಬಳಿಕ ಅಕ್ಷಯ ತೃತೀಯಕ್ಕೆ ಹೊಸದೊಂದು ಅಭಿಯಾನ ಶುರುವಾಗಿದೆ. ಅಕ್ಷಯ ತೃತೀಯ ಸಂದರ್ಭದಲ್ಲಿ ಚಿನ್ನವನ್ನು ಹಿಂದುಗಳ ಆಭರಣ ಮಳಿಗೆಯಲ್ಲಿಯೇ ಖರೀದಿ ಮಾಡಿ ಎನ್ನುವ ಅಭಿಯಾನ ಆರಂಭವಾಗಿದೆ.

ಬೆಂಗಳೂರು (ಏ.24): ಧರ್ಮ ದಂಗಲ್ ನ ಮುಂದುವರಿದ ಭಾಗವಾಗಿ ಮುಂಬರುವ ಅಕ್ಷಯ ತೃತೀಯದಂದು (Akshaya Tritiya ) ಹಿಂದೂಗಳು (Hindu)ಹಿಂದುಗಳ ಮಾಲೀಕತ್ವದ ಆಭರಣ ಮಳಿಗೆಯಲ್ಲೇ  (jewelry Shop) ಚಿನ್ನವನ್ನು (Gold) ಖರೀದಿ ಮಾಡಬೇಕು ಎನ್ನುವ ಅಭಿಯಾನವನ್ನು ಶ್ರೀರಾಮ ಸೇನೆ (Sri Rama Sene)ಆರಂಭಿಸಿದೆ.

ಹಲಾಲ್ ಹಾಗೂ ವ್ಯಾಪಾರ ಸಂಘರ್ಷದ ಬಳಿಕ, ಅಕ್ಷಯ ತೃತೀಯಕ್ಕೆ ಹೊಸ ಅಭಿಯಾನ ಆರಂಭವಾಗಿದೆ. ಅಕ್ಷಯ ತೃತೀಯ ಚಿನ್ನ ಖರೀದಿ ಸಂಭಂಧ ಆರಂಭವಾಗಿರೋ ಟ್ವಿಟರ್ (Twitter) ಅಭಿಯಾನಕ್ಕೆ ಶ್ರೀರಾಮ ಸೇನೆಯ ಸಂಪೂರ್ಣ ಬೆಂಬಲ ಇದೆ. ಹೀಗಾಗಿ ಅಕ್ಷಯ ತೃತೀಯಕ್ಕೆ ಹಿಂದೂಗಳ ಆಭರಣ ಮಳಿಗೆಯಲ್ಲೇ ಖರೀದಿ ಮಾಡಿ ಎಂದು ಕರೆ ನೀಡಿದರು.

ಧರ್ಮ ದಂಗಲ್: ಹಿಂದೂಗಳ ಅಂಗಡಿಗಳಲ್ಲೇ ಚಿನ್ನ ಖರೀದಿಗಾಗಿ ಅಭಿಯಾನ

ಬಾಗಲಕೋಟೆಯಲ್ಲಿ ಮಾತನಾಡಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, "ಮೇ 3 ರಂದು ನಡೆಯಲಿರುವ ಅಕ್ಷಯ ತೃತೀಯ ದಿನ, ಕೇರಳ ಮೂಲದ ಮುಸ್ಲೀಮರ ಆಭರಣ ಮಳಿಗೆಯಲ್ಲಿ ಚಿನ್ನ ಖರೀದಿ ಬೇಡ. ಕೇರಳ ಮೂಲದ ಮುಸ್ಲಿಂ ಆಭರಣ ಮಳಿಗೆ ರಾಜ್ಯದಲ್ಲಿ ಪ್ರಖ್ಯಾತವಾಗಿದೆ. ಯಾವುದೇ ಕಾರಣಕ್ಕೂ ಈ ಮಳಿಗೆಗಳಲ್ಲಿ ಚಿನ್ನವನ್ನು ಖರೀದಿ ಮಾಡಬೇಡಿ' ಎಂದು ಹೇಳಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more