ಹಲಾಲ್, ಜಟ್ಕಾ ಬಳಿಕ ಈಗ ಹಿಂದೂ ಸಂಘಟನೆಗಳಿಂದ ಅಕ್ಷಯ ತೃತೀಯ ಅಭಿಯಾನ!

ಹಲಾಲ್, ಜಟ್ಕಾ ಬಳಿಕ ಈಗ ಹಿಂದೂ ಸಂಘಟನೆಗಳಿಂದ ಅಕ್ಷಯ ತೃತೀಯ ಅಭಿಯಾನ!

Published : Apr 24, 2022, 07:44 PM IST

ಹಲಾಲ್ ಹಾಗೂ ವ್ಯಾಪಾರದ ಬಳಿಕ ಅಕ್ಷಯ ತೃತೀಯಕ್ಕೆ ಹೊಸದೊಂದು ಅಭಿಯಾನ ಶುರುವಾಗಿದೆ. ಅಕ್ಷಯ ತೃತೀಯ ಸಂದರ್ಭದಲ್ಲಿ ಚಿನ್ನವನ್ನು ಹಿಂದುಗಳ ಆಭರಣ ಮಳಿಗೆಯಲ್ಲಿಯೇ ಖರೀದಿ ಮಾಡಿ ಎನ್ನುವ ಅಭಿಯಾನ ಆರಂಭವಾಗಿದೆ.

ಬೆಂಗಳೂರು (ಏ.24): ಧರ್ಮ ದಂಗಲ್ ನ ಮುಂದುವರಿದ ಭಾಗವಾಗಿ ಮುಂಬರುವ ಅಕ್ಷಯ ತೃತೀಯದಂದು (Akshaya Tritiya ) ಹಿಂದೂಗಳು (Hindu)ಹಿಂದುಗಳ ಮಾಲೀಕತ್ವದ ಆಭರಣ ಮಳಿಗೆಯಲ್ಲೇ  (jewelry Shop) ಚಿನ್ನವನ್ನು (Gold) ಖರೀದಿ ಮಾಡಬೇಕು ಎನ್ನುವ ಅಭಿಯಾನವನ್ನು ಶ್ರೀರಾಮ ಸೇನೆ (Sri Rama Sene)ಆರಂಭಿಸಿದೆ.

ಹಲಾಲ್ ಹಾಗೂ ವ್ಯಾಪಾರ ಸಂಘರ್ಷದ ಬಳಿಕ, ಅಕ್ಷಯ ತೃತೀಯಕ್ಕೆ ಹೊಸ ಅಭಿಯಾನ ಆರಂಭವಾಗಿದೆ. ಅಕ್ಷಯ ತೃತೀಯ ಚಿನ್ನ ಖರೀದಿ ಸಂಭಂಧ ಆರಂಭವಾಗಿರೋ ಟ್ವಿಟರ್ (Twitter) ಅಭಿಯಾನಕ್ಕೆ ಶ್ರೀರಾಮ ಸೇನೆಯ ಸಂಪೂರ್ಣ ಬೆಂಬಲ ಇದೆ. ಹೀಗಾಗಿ ಅಕ್ಷಯ ತೃತೀಯಕ್ಕೆ ಹಿಂದೂಗಳ ಆಭರಣ ಮಳಿಗೆಯಲ್ಲೇ ಖರೀದಿ ಮಾಡಿ ಎಂದು ಕರೆ ನೀಡಿದರು.

ಧರ್ಮ ದಂಗಲ್: ಹಿಂದೂಗಳ ಅಂಗಡಿಗಳಲ್ಲೇ ಚಿನ್ನ ಖರೀದಿಗಾಗಿ ಅಭಿಯಾನ

ಬಾಗಲಕೋಟೆಯಲ್ಲಿ ಮಾತನಾಡಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, "ಮೇ 3 ರಂದು ನಡೆಯಲಿರುವ ಅಕ್ಷಯ ತೃತೀಯ ದಿನ, ಕೇರಳ ಮೂಲದ ಮುಸ್ಲೀಮರ ಆಭರಣ ಮಳಿಗೆಯಲ್ಲಿ ಚಿನ್ನ ಖರೀದಿ ಬೇಡ. ಕೇರಳ ಮೂಲದ ಮುಸ್ಲಿಂ ಆಭರಣ ಮಳಿಗೆ ರಾಜ್ಯದಲ್ಲಿ ಪ್ರಖ್ಯಾತವಾಗಿದೆ. ಯಾವುದೇ ಕಾರಣಕ್ಕೂ ಈ ಮಳಿಗೆಗಳಲ್ಲಿ ಚಿನ್ನವನ್ನು ಖರೀದಿ ಮಾಡಬೇಡಿ' ಎಂದು ಹೇಳಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more