ನಾಡ ಹಬ್ಬ ದಸರಾ ಸಂಪನ್ನ.. ಗಜಪಡೆ ಕೂಲ್.. ಕೂಲ್! ನಾಲ್ಕನೇ ಬಾರಿ ಆಂಬಾರಿ ಹೊತ್ತ ಕೂಂಬಿಂಗ್ ಸ್ಪೆಷಲಿಸ್ಟ್!

ನಾಡ ಹಬ್ಬ ದಸರಾ ಸಂಪನ್ನ.. ಗಜಪಡೆ ಕೂಲ್.. ಕೂಲ್! ನಾಲ್ಕನೇ ಬಾರಿ ಆಂಬಾರಿ ಹೊತ್ತ ಕೂಂಬಿಂಗ್ ಸ್ಪೆಷಲಿಸ್ಟ್!

Published : Oct 26, 2023, 11:27 AM IST

ವಿಶ್ವವಿಖ್ಯಾತ ನಾಡ ಹಬ್ಬ ದಸರಾ ಸಾಂಪ್ರದಾಯಿಕವಾಗಿ ಸಂಪನ್ನಗೊಂಡಿದೆ. ಕ್ಯಾಪ್ಟನ್ ಅಭಿಮನ್ಯು ನಾಲ್ಕನೇ ಬಾರಿಗೆ ಯಶಸ್ವಿಯಾಗಿ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದಾನೆ‌. ಲಕ್ಷಾಂತರ ಮಂದಿ ಜನ್ರ ಆಕರ್ಷಣಿಯ ಕೇಂದ್ರವಾಗಿದ್ದ ಗಜಪಡೆ ಅರಮನೆ ಅಂಗಳದಲ್ಲಿ ರಿಲ್ಯಾಕ್ಸ್ ಮಾಡ್ತಿವೆ.
 

ಬರದ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ(Mysore) ನಡೆದ 2023ನೇ ವರ್ಷದ ದಸರಾ(Dasara) ಯಾವುದೇ ತೊಡಕಿಲ್ಲದೆ ವೈಭವಪೂರಿತವಾಗಿ ಸಮಾಪ್ತಿಯಾಗಿದೆ. ನಾಲ್ಕನೇ ಬಾರಿಗೆ ಯಶಸ್ವಿಯಾಗಿ ಅಂಬಾರಿಯನ್ನ ಹೊತ್ತು ಸಾಗಿದ ಕ್ಯಾಪ್ಟನ್ ಅಭಿಮನ್ಯು(Abhimanyu) ತನ್ನ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ, ಅರಮನೆ ಅಂಗಳದಲ್ಲಿಗ ರಿಲ್ಯಾಕ್ಸ್ ಮೂಡಿನಲ್ಲಿ ಇದೆ. ದಸರಾಗಾಗಿ 50 ದಿನಗಳ ಹಿಂದೆ ಅರಮನೆ ಅಂಗಳಕ್ಕೆ ಬಂದ ಗಜಪಡೆ ಅರಣ್ಯ ಇಲಾಖೆ ರಾಜಾತಿಥ್ಯದಿಂದ ತಮ್ಮ ತೂಕ ಹೆಚ್ಚು ಮಾಡಿವೆ. ಎಷ್ಟೆಷ್ಟು ತೂಕ ಹೆಚ್ಚಿಸಿಕೊಂಡಿದೆ ಅಂತಾ ನೋಡೋದಾದ್ರೆ. 4,370 ಕೆ.ಜಿ. ಇದ್ದ ಭೀಮ ಬರೋಬ್ಬರಿ 315 ಕೆ.ಜಿ. ತೂಕ ಹೆಚ್ಚಿಸಿಕೊಂಡ 4,685 ಕೆ.ಜಿಯಾಗಿದ್ದಾನೆ. 5,160 ಕೆ.ಜಿ ಇದ್ದ ಕ್ಯಾಪ್ಟನ್ ಅಭಿಮನ್ಯು 140 ಕೆ.ಜಿ ತೂಕ ಹೆಚ್ಚಿಸಿಕೊಂಡು 5,300 ಕೆ.ಜಿ ಆಗಿದ್ದಾನೆ. 4,970 ಕೆಜಿ ಇದ್ದ ಪ್ರಶಾಂತ 245 ಕೆ.ಜಿ.ತೂಕ ಹೆಚ್ಚಿಸಿಕೊಂಡು 5,215 ಆಗಿದ್ದಾನೆ. 5,080 ಕೆ.ಜಿ ಇದ್ದ ಗೋಪಿ 160 ಕೆ.ಜಿ.ತೂಕ ಹೆಚ್ಚಿಸಿಕೊಂಡು 5,240 ಕೆ.ಜಿ ಆಗಿದ್ದಾನೆ, ಇನ್ನು 5,680 ಕೆ.ಜಿ.ತೂಕ ಹೊಂದಿದ್ದ ಮಾಜಿ ಕ್ಯಾಪ್ಟನ್ ಅರ್ಜುನ 170 ಕೆ.ಜಿ. ತೂಕ ಹೆಚ್ಚಿಸಿಕೊಂಡು 5,850 ಕೆಜಿ ಆಗಿದ್ದಾನೆ. ಒಟ್ಟಿನಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ ಗಜಪಡೆ ತಮ್ಮ ಜವಾಬ್ದಾರಿಯನ್ನ ಅಚ್ಚುಕಟ್ಟಾಗಿ ನಿಭಾಯಿಸಿದ್ದು ಎಲ್ಲರಲ್ಲೂ ಸಂತಸ ಮೂಡಿಸಿದೆ.

ಇದನ್ನೂ ವೀಕ್ಷಿಸಿ:  ಕಾಲುವೆಯಲ್ಲಿ ಬೆಳೆದು ನಿಂತ ಗಿಡಗಳು.. ರೈತರಿಗೆ ಸಂಕಷ್ಟ: ಯಾದಗಿರಿ ಅನ್ನದಾತ ಕಂಗಾಲು

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!