ಪ್ರತಿಭಟನೆ ಮಧ್ಯೆಯೂ ಹರಿಯುತ್ತಿರುವ ಕಾವೇರಿ: ಸುಪ್ರೀಂ ಅಂಗಳದಲ್ಲಿ ‘ಕಾವೇರಿ’ ಭವಿಷ್ಯ !

ಪ್ರತಿಭಟನೆ ಮಧ್ಯೆಯೂ ಹರಿಯುತ್ತಿರುವ ಕಾವೇರಿ: ಸುಪ್ರೀಂ ಅಂಗಳದಲ್ಲಿ ‘ಕಾವೇರಿ’ ಭವಿಷ್ಯ !

Published : Sep 01, 2023, 11:46 AM IST

ರಾಜ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ನೀರು ಇಲ್ಲದಿದ್ರೂ ಕೆಆರ್‌ಎಸ್‌ನಿಂದ ಪ್ರತಿನಿತ್ಯ ತಮಿಳುನಾಡಿಗೆ ಸರ್ಕಾರ ನೀಡು ಬಿಡುತ್ತಿದೆ. ಸರ್ಕಾರದ ನಿರ್ಧಾರಕ್ಕೆ ಅನ್ನದಾತರು ಸಿಟ್ಟು ಹೊರಹಾಕಿದ್ದಾರೆ. ಇತ್ತ ಸುಪ್ರೀಂ ಅಂಗಳದಲ್ಲಿ ಕಾವೇರಿ ಭವಿಷ್ಯ ನಿರ್ಧಾರವಾಗಲಿದೆ.

ಒಂದು ಕಡೆ ರೈತರ ಆಕ್ರೋಶದ ಕಿಚ್ಚು, ಮತ್ತೊಂದಡೆ ಕಾವೇರಿ ನದಿಗೆ ಇಳಿದು ಅರೆಬೆತ್ತಲೆ ಪ್ರೊಟೆಸ್ಟ್, ಅನ್ಯಾಯ ಅನ್ಯಾಯ ಎಂಬ ಘೋಷಣೆ ಮಧ್ಯೆ ಕಾವೇರಿ ನಮ್ಮದು ಎಂದು ರೈತರ ಪ್ರಮಾಣ. ಇದು ಕಾವೇರಿ ಕೊಳ್ಳದಲ್ಲಿ ಭುಗಿಲೆದ್ದ ಕಾವೇರಿ(Cauvery) ಕಿಚ್ಚು. ಕೆಆರ್‌ಎಸ್‌ನಲ್ಲಿ ನೀರಿಲ್ಲ. ಸಂಕಷ್ಟದ ನಡುವೆಯೂ ಕಾವೇರಿ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ(Tamilnadu) ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಯುತ್ತಿದೆ. ಸರ್ಕಾರದ ಈ ನಡೆಯಿಂದ ಸಿಟ್ಟಿಗೆದ್ದ ರೈತರು ಪ್ರತಿಭಟನೆಗೆ ಇಳಿದಿದ್ದಾರೆ. ಶ್ರೀರಂಗಪಟ್ಟಣದ ಬಳಿ ನೀರಿಗೆ ಇಳಿದು ರೈತರು ಕಾವೇರಿ ನಮ್ಮವಳು ಎಂದು ಘೋಷಣೆ ಕೂಗಿದ್ರು. K.R.S ಎದುರು ಶಾಸಕ ದರ್ಶನ್ ಪುಟ್ಟಣಯ್ಯ (Darshan Puttanaiah) ನೇತೃತ್ವದಲ್ಲೂ ಅಹೋರಾತ್ರಿ ಧರಣಿ ನಡೆಯುತ್ತಿದೆ. ಇನ್ನು ಮಂಡ್ಯ(Mandya) ನಗರದಲ್ಲೂ ರೈತರು ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ರು. ರೈತ ಪರ, ಕನ್ನಡ ಪರ ಸಂಘಟನೆಗಳು ಒಟ್ಟಾಗಿ ಕಾವೇರಿ ಕಹಳೆ ಮೊಳಗಿಸಿದ್ರು. ಕರುನಾಡಲ್ಲಿ ಕಾವೇರಿ ಕಿಚ್ಚು ಹೆಚ್ಚಾಗುತ್ತಿದ್ರೆ. ಇತ್ತ ಕಾವೇರಿ ಪ್ರಾಧಿಕಾರದ ಆದೇಶದಂತೆ ಪ್ರತಿನಿತ್ಯ ತಮಿಳುನಾಡಿಗೆ K.R.S ನಿಂದ 5 ಸಾವಿರ ಕ್ಯೂಸೆಕ್ ನೀರು ಹರಿಯುತ್ತಿದೆ. ಈ ಮಧ್ಯೆ ಸುಪ್ರೀಂಕೋರ್ಟ್‌ನಲ್ಲಿ ಜಲ ವಿವಾದದ ಅರ್ಜಿ ವಿಚಾರಣೆಗೆ ಬರಲಿದೆ.

ಇದನ್ನೂ ವೀಕ್ಷಿಸಿ:  16 ವರ್ಷ ಸಾರ್ಥಕ ಸೇವೆ: ಶಿಕ್ಷಕನ ವರ್ಗಾವಣೆಗೆ ವಿದ್ಯಾರ್ಥಿಗಳ ಕಣ್ಣೀರ ಬೀಳ್ಕೊಡುಗೆ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more