ಪ್ರತಿಭಟನೆ ಮಧ್ಯೆಯೂ ಹರಿಯುತ್ತಿರುವ ಕಾವೇರಿ: ಸುಪ್ರೀಂ ಅಂಗಳದಲ್ಲಿ ‘ಕಾವೇರಿ’ ಭವಿಷ್ಯ !

ಪ್ರತಿಭಟನೆ ಮಧ್ಯೆಯೂ ಹರಿಯುತ್ತಿರುವ ಕಾವೇರಿ: ಸುಪ್ರೀಂ ಅಂಗಳದಲ್ಲಿ ‘ಕಾವೇರಿ’ ಭವಿಷ್ಯ !

Published : Sep 01, 2023, 11:46 AM IST

ರಾಜ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ನೀರು ಇಲ್ಲದಿದ್ರೂ ಕೆಆರ್‌ಎಸ್‌ನಿಂದ ಪ್ರತಿನಿತ್ಯ ತಮಿಳುನಾಡಿಗೆ ಸರ್ಕಾರ ನೀಡು ಬಿಡುತ್ತಿದೆ. ಸರ್ಕಾರದ ನಿರ್ಧಾರಕ್ಕೆ ಅನ್ನದಾತರು ಸಿಟ್ಟು ಹೊರಹಾಕಿದ್ದಾರೆ. ಇತ್ತ ಸುಪ್ರೀಂ ಅಂಗಳದಲ್ಲಿ ಕಾವೇರಿ ಭವಿಷ್ಯ ನಿರ್ಧಾರವಾಗಲಿದೆ.

ಒಂದು ಕಡೆ ರೈತರ ಆಕ್ರೋಶದ ಕಿಚ್ಚು, ಮತ್ತೊಂದಡೆ ಕಾವೇರಿ ನದಿಗೆ ಇಳಿದು ಅರೆಬೆತ್ತಲೆ ಪ್ರೊಟೆಸ್ಟ್, ಅನ್ಯಾಯ ಅನ್ಯಾಯ ಎಂಬ ಘೋಷಣೆ ಮಧ್ಯೆ ಕಾವೇರಿ ನಮ್ಮದು ಎಂದು ರೈತರ ಪ್ರಮಾಣ. ಇದು ಕಾವೇರಿ ಕೊಳ್ಳದಲ್ಲಿ ಭುಗಿಲೆದ್ದ ಕಾವೇರಿ(Cauvery) ಕಿಚ್ಚು. ಕೆಆರ್‌ಎಸ್‌ನಲ್ಲಿ ನೀರಿಲ್ಲ. ಸಂಕಷ್ಟದ ನಡುವೆಯೂ ಕಾವೇರಿ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ(Tamilnadu) ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಯುತ್ತಿದೆ. ಸರ್ಕಾರದ ಈ ನಡೆಯಿಂದ ಸಿಟ್ಟಿಗೆದ್ದ ರೈತರು ಪ್ರತಿಭಟನೆಗೆ ಇಳಿದಿದ್ದಾರೆ. ಶ್ರೀರಂಗಪಟ್ಟಣದ ಬಳಿ ನೀರಿಗೆ ಇಳಿದು ರೈತರು ಕಾವೇರಿ ನಮ್ಮವಳು ಎಂದು ಘೋಷಣೆ ಕೂಗಿದ್ರು. K.R.S ಎದುರು ಶಾಸಕ ದರ್ಶನ್ ಪುಟ್ಟಣಯ್ಯ (Darshan Puttanaiah) ನೇತೃತ್ವದಲ್ಲೂ ಅಹೋರಾತ್ರಿ ಧರಣಿ ನಡೆಯುತ್ತಿದೆ. ಇನ್ನು ಮಂಡ್ಯ(Mandya) ನಗರದಲ್ಲೂ ರೈತರು ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ರು. ರೈತ ಪರ, ಕನ್ನಡ ಪರ ಸಂಘಟನೆಗಳು ಒಟ್ಟಾಗಿ ಕಾವೇರಿ ಕಹಳೆ ಮೊಳಗಿಸಿದ್ರು. ಕರುನಾಡಲ್ಲಿ ಕಾವೇರಿ ಕಿಚ್ಚು ಹೆಚ್ಚಾಗುತ್ತಿದ್ರೆ. ಇತ್ತ ಕಾವೇರಿ ಪ್ರಾಧಿಕಾರದ ಆದೇಶದಂತೆ ಪ್ರತಿನಿತ್ಯ ತಮಿಳುನಾಡಿಗೆ K.R.S ನಿಂದ 5 ಸಾವಿರ ಕ್ಯೂಸೆಕ್ ನೀರು ಹರಿಯುತ್ತಿದೆ. ಈ ಮಧ್ಯೆ ಸುಪ್ರೀಂಕೋರ್ಟ್‌ನಲ್ಲಿ ಜಲ ವಿವಾದದ ಅರ್ಜಿ ವಿಚಾರಣೆಗೆ ಬರಲಿದೆ.

ಇದನ್ನೂ ವೀಕ್ಷಿಸಿ:  16 ವರ್ಷ ಸಾರ್ಥಕ ಸೇವೆ: ಶಿಕ್ಷಕನ ವರ್ಗಾವಣೆಗೆ ವಿದ್ಯಾರ್ಥಿಗಳ ಕಣ್ಣೀರ ಬೀಳ್ಕೊಡುಗೆ

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more