ಮೋದಿ ಪ್ರಧಾನಿಯಾದ ಮೇಲೆ ಭಾರತವನ್ನು ಬೇರೆ ದೇಶಗಳು ನೋಡುವ ದೃಷ್ಟಿ ಬದಲಾಗಿದೆ: ಸೂಲಿಬೆಲೆ

Aug 15, 2023, 11:13 AM IST

ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು  ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ( Prime Minister Narendra Modi) ಅವರು ಧ್ವಜಾರೋಹಣ ಮಾಡಿದರು. ಸ್ವಾತಂತ್ರ್ಯ ದಿನಾಚರಣೆ(Independence day) ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ಮಾತನಾಡಿದ್ದು, ಭಾರತ ವಿಶ್ವಗುರು ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು. ನಿರಂತರವಾಗಿ ಭಾರತ ಈ ಪಟ್ಟದಲ್ಲೇ ಇರಬೇಕು. ಮೋದಿ ಪ್ರಧಾನಿಯಾದ ಮೇಲೆ ಭಾರತವನ್ನು ನೋಡುವ ದೃಷ್ಟಿ ಬದಲಾಗಿದೆ. ಕೋವಿಡ್‌ ವ್ಯಾಕ್ಷಿನ್‌ನನ್ನು ಭಾರತ ಜಗತ್ತಿಗೆ ತಲುಪಿಸಿದೆ. ಭಾರತ ಯಾರೇ ಸಮಸ್ಯೆಯಲ್ಲಿದ್ರೂ, ಅವರ ಕಷ್ಟಕ್ಕೆ ಸಹಾಯ ಮಾಡುವ ಮಟ್ಟಕ್ಕೆ ಬೆಳೆದಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಇದನ್ನೂ ವೀಕ್ಷಿಸಿ:  ದೇಶದ ಅಭಿವೃದ್ಧಿ ದೃಷ್ಟಿಯಿಂದ ಗ್ಯಾರಂಟಿ ಯೋಜನೆ ಜಾರಿ: ಸಿಎಂ