Night Curfew ಸಮಯ ಬದಲಾವಣೆ ಮಾಡಿ:  ಉದ್ಯಮಿಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧಾರ

Night Curfew ಸಮಯ ಬದಲಾವಣೆ ಮಾಡಿ: ಉದ್ಯಮಿಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧಾರ

Suvarna News   | Asianet News
Published : Jan 27, 2022, 12:31 PM ISTUpdated : Jan 27, 2022, 12:34 PM IST

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಅದರ ತೀವ್ರತೆ ಹೆಚ್ಚಾಗಿಲ್ಲ. ಹೀಗಾಗಿ ಜಾರಿಯಾಗಿದ್ದ ವೀಕೆಂಡ್ ಕರ್ಫ್ಯೂನ ಸರ್ಕಾರ ತೆರವುಗೊಳಿಸಿದೆ. ಸದ್ಯ ನೈಟ್ ಕರ್ಫ್ಯೂ ಜಾರಿಯಲ್ಲಿದ್ದು, ಸಮಯ ವಿಸ್ತರಣೆ ಮಾಡುವಂತೆ ಕೆಲ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಲು ಮುಂದಾಗಿವೆ. 

ಬೆಂಗಳೂರು (ಜ.27): ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಅದರ ತೀವ್ರತೆ ಹೆಚ್ಚಾಗಿಲ್ಲ. ಹೀಗಾಗಿ ಜಾರಿಯಾಗಿದ್ದ ವೀಕೆಂಡ್ ಕರ್ಫ್ಯೂ (Weekend Curfew) ಸರ್ಕಾರ ತೆರವುಗೊಳಿಸಿದೆ. ಸದ್ಯ ನೈಟ್ ಕರ್ಫ್ಯೂ (Night Curfew) ಜಾರಿಯಲ್ಲಿದ್ದು, ಸಮಯ ವಿಸ್ತರಣೆ ಮಾಡುವಂತೆ ಕೆಲ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಲು ಮುಂದಾಗಿವೆ. ರಾತ್ರಿ 11.30 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ (Basavaraj Bommai) ಮನವಿ ಸಲ್ಲಿಸಲು ವಿವಿಧ ವಲಯಗಳ ಉದ್ಯಮಿಗಳು ನಿರ್ಧರಿಸಿದ್ದಾರೆ.

Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ

ವಾರದ 7 ದಿನವೂ ಇದೇ ಸಮಯ ಜಾರಿಗೆ ಒತ್ತಾಯಿಸುತ್ತಿದ್ದು, ಈ ವಾರದಲ್ಲಿ ಉದ್ಯಮಿಗಳು ಮುಖ್ಯಮಂತ್ರಿಗೆ ಈ ಬಗ್ಗೆ ಭೇಟಿ ಮಾಡಿ ಮನವಿ ಸಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಸದ್ಯ ರಾಜ್ಯದಲ್ಲಿ ರಾತ್ರಿ 10 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಇದೆ. ಆದರೆ ಈ ಸಮಯವನ್ನು ಒಂದೂವರೆ ಗಂಟೆ ಮುಂದೂಡಿಕೆ ಮಾಡುವಂತೆ ಹೋಟೆಲ್ ಮಾಲೀಕರ ಸಂಘ, ಬಾರ್, ಪಬ್ ಆ್ಯಂಡ್ ರೆಸ್ಟೊರೆಂಟ್, ಕಲ್ಯಾಣ ಮಂಟಪದ ಮಾಲೀಕರು, ಥಿಯೇಟರ್ ಮಾಲೀಕರು, ಬೀದಿ ಬದಿ ವ್ಯಾಪಾರಿಗಳ ಸಂಘ, ಕ್ಯಾಟರಿಂಗ್ ಉದ್ಯಮದವರು ಸೇರಿದಂತೆ ಹಲವು ಸಂಘಟನೆಗಳಿಂದ ಸಿಎಂಗೆ ಮನವಿ ಮಾಡಲು ನಿರ್ಧರಿಸಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more