ಸಿಪಿ ಯೋಗೇಶ್ವರ್ ವಿರುದ್ದ ಗೆದ್ದು ಬೀಗ್ತಾರ ನಿಖಿಲ್ ಕುಮಾರಸ್ವಾಮಿ? ಚನ್ನಪಟ್ಟಣದ ಚದುರಂಗ!

Oct 24, 2024, 11:51 PM IST

ಕರ್ನಾಟಕ ಉಪ ಚುನಾವಣೆಯಲ್ಲಿ ಚನ್ನಪಟ್ಟಣ ರಣಾಂಗಣ ರಂಗೇರಿದೆ. ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾದರೆ, ಇತ್ತ ಬಿಜಿಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಇಬ್ಬರು ಗೆಲುವಿನ ವಿಶ್ವಾಸದಲ್ಲಿದ್ದಾರೆ. ಮೇಲ್ನೋಟಕ್ಕೆ ಇದು ನಿಖಿಲ್ ವರ್ಸಸ್ ಯೋಗೇಶ್ವರ್ ಆಗಿದ್ದರೂ ಇದರ ಹಿಂದೆ ಹೆಚ್‌ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖರ ಹೋರಾಟವಾಗಿದೆ. ಹೆಚ್‌ಡಿ ಕಮಾರಸ್ವಾಮಿಗೆ ಇದು ಪ್ರತಿಷ್ಠೆಯ ಕದನವಾಗಿದೆ.