Halal Row ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ ಎಂದ ಸಿಎಂ!

Halal Row ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ ಎಂದ ಸಿಎಂ!

Published : Mar 31, 2022, 05:14 PM ISTUpdated : Mar 31, 2022, 05:39 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಎಚ್ ಡಿಕೆ ವಾಗ್ದಾಳಿ

ಸಿಎಂಗೆ ಗಂಡಸ್ತನ ಇದ್ರೆ ಹಲಾಲ್, ವ್ಯಾಪಾರ ಸಂಘರ್ಷ ತಡೆಯಲಿ

ಎಚ್ ಡಿಕೆ ಮಾತಿಗೆ ಸಿಎಂ ತೀಕ್ಷ್ಣ ಪ್ರತಿಕ್ರಿಯೆ

ಬೆಂಗಳೂರು (ಮಾ  31): ರಾಜ್ಯದಲ್ಲಿ ತೀವ್ರವಾಗಿರುವ ಹಲಾಲ್ (Halal Row)ಹಾಗೂ ಮುಸ್ಲಿಮರ ಮಳಿಗೆಗಳಿಗೆ ನಿರ್ಬಂಧ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( HD Kumaraswamy) ಕೆಂಡಾಮಂಡಲವಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ ಅವರು, ಸಿಎಂಗೆ ಗಂಡಸ್ತನ ಇದ್ದರೆ ರಾಜ್ಯದಲ್ಲಿ ಈಗ ನಡೆಯುತ್ತಿರುವ ವಿವಾದಗಳನ್ನು ತಡೆಯಲಿ ಎಂದು ಸವಾಲ್ ಹಾಕಿದ್ದಾರೆ. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಬಸವರಾಜ ಬೊಮ್ಮಾಯಿ, "ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ. ಈ ವಿಚಾರವನ್ನು ದಕ್ಷತೆಯಿಂದ ಎದುರಿಸಲಿದ್ದೇವೆ' ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ (BJP) ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಈ ವಿಚಾರವನ್ನು ಇಲ್ಲಿಗೆ ನಿಲ್ಲಿಸಿ. ಸಿಎಂಗೆ ಗಂಡಸ್ತನ ಇದ್ದರೆ ಇದನ್ನು ತಡೆಯಲಿ. ನಾನು ಈ ಪದವನ್ನು ಬಳಸಬಾರದು. ಆದರೆ, ತಡೆಯಲಾರದೆ ಬಳಸಿದ್ದೇನೆ. ಹಲಾಲ್ ನಿಷೇಧಕ್ಕೆ ಕರಪತ್ರವನ್ನುಹಂಚಲಾಗುತ್ತಿದೆ. ಕೇಸರಿ ಬಟ್ಟೆಯನ್ನು ಧರಿಸಿಕೊಂಡು ಹಳ್ಳಿ ಹಳ್ಳಿಯಲ್ಲಿ ವಿಷಬೀಜ ಬಿತ್ತುತ್ತಿದ್ದೀರಿ. ಯಾವ ಸಂವಿಧಾನವನ್ನುಈ ಮೂಲಕ ಗೌರವಿಸಲಿ ಹೊರಟಿದ್ದೀರಿ ಎಂದು ಎಚ್ ಡಿಕೆ ಪ್ರಶ್ನೆ ಮಾಡಿದ್ದಾರೆ.

Karnataka Politics ಕುಮಾರಸ್ವಾಮಿ ಗಂಡಸ್ತನ ಮಾತಿಗೆ ಸಿಡಿದೆದ್ದ ಬಿಜೆಪಿ ನಾಯಕರು

ಎಚ್ ಡಿಕೆ ಅವರ ಗಂಡಸ್ತನ ಸವಾಲಿಗೆ ಉತ್ತರ ಕೊಡೋದಿಲ್ಲ. ಇದರಲ್ಲಿ ಗಂಡಸ್ತನದ ಪ್ರಶ್ನೆಯೇ ಇಲ್ಲ. ಯಾವುದೇ ವಿಚಾರವನ್ನು ದಕ್ಷತೆಯಿಂದ ಎದುರಿಸಿದ್ದೇವೆ. ಎಚ್ ಡಿಕೆ ಮಾತಿಗೆ ನಾನು ಉತ್ತರ ನೀಡೋದಿಲ್ಲ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡೋದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more