Halal Row ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ ಎಂದ ಸಿಎಂ!

Halal Row ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ ಎಂದ ಸಿಎಂ!

Published : Mar 31, 2022, 05:14 PM ISTUpdated : Mar 31, 2022, 05:39 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಎಚ್ ಡಿಕೆ ವಾಗ್ದಾಳಿ

ಸಿಎಂಗೆ ಗಂಡಸ್ತನ ಇದ್ರೆ ಹಲಾಲ್, ವ್ಯಾಪಾರ ಸಂಘರ್ಷ ತಡೆಯಲಿ

ಎಚ್ ಡಿಕೆ ಮಾತಿಗೆ ಸಿಎಂ ತೀಕ್ಷ್ಣ ಪ್ರತಿಕ್ರಿಯೆ

ಬೆಂಗಳೂರು (ಮಾ  31): ರಾಜ್ಯದಲ್ಲಿ ತೀವ್ರವಾಗಿರುವ ಹಲಾಲ್ (Halal Row)ಹಾಗೂ ಮುಸ್ಲಿಮರ ಮಳಿಗೆಗಳಿಗೆ ನಿರ್ಬಂಧ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( HD Kumaraswamy) ಕೆಂಡಾಮಂಡಲವಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ ಅವರು, ಸಿಎಂಗೆ ಗಂಡಸ್ತನ ಇದ್ದರೆ ರಾಜ್ಯದಲ್ಲಿ ಈಗ ನಡೆಯುತ್ತಿರುವ ವಿವಾದಗಳನ್ನು ತಡೆಯಲಿ ಎಂದು ಸವಾಲ್ ಹಾಕಿದ್ದಾರೆ. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಬಸವರಾಜ ಬೊಮ್ಮಾಯಿ, "ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ. ಈ ವಿಚಾರವನ್ನು ದಕ್ಷತೆಯಿಂದ ಎದುರಿಸಲಿದ್ದೇವೆ' ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ (BJP) ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಈ ವಿಚಾರವನ್ನು ಇಲ್ಲಿಗೆ ನಿಲ್ಲಿಸಿ. ಸಿಎಂಗೆ ಗಂಡಸ್ತನ ಇದ್ದರೆ ಇದನ್ನು ತಡೆಯಲಿ. ನಾನು ಈ ಪದವನ್ನು ಬಳಸಬಾರದು. ಆದರೆ, ತಡೆಯಲಾರದೆ ಬಳಸಿದ್ದೇನೆ. ಹಲಾಲ್ ನಿಷೇಧಕ್ಕೆ ಕರಪತ್ರವನ್ನುಹಂಚಲಾಗುತ್ತಿದೆ. ಕೇಸರಿ ಬಟ್ಟೆಯನ್ನು ಧರಿಸಿಕೊಂಡು ಹಳ್ಳಿ ಹಳ್ಳಿಯಲ್ಲಿ ವಿಷಬೀಜ ಬಿತ್ತುತ್ತಿದ್ದೀರಿ. ಯಾವ ಸಂವಿಧಾನವನ್ನುಈ ಮೂಲಕ ಗೌರವಿಸಲಿ ಹೊರಟಿದ್ದೀರಿ ಎಂದು ಎಚ್ ಡಿಕೆ ಪ್ರಶ್ನೆ ಮಾಡಿದ್ದಾರೆ.

Karnataka Politics ಕುಮಾರಸ್ವಾಮಿ ಗಂಡಸ್ತನ ಮಾತಿಗೆ ಸಿಡಿದೆದ್ದ ಬಿಜೆಪಿ ನಾಯಕರು

ಎಚ್ ಡಿಕೆ ಅವರ ಗಂಡಸ್ತನ ಸವಾಲಿಗೆ ಉತ್ತರ ಕೊಡೋದಿಲ್ಲ. ಇದರಲ್ಲಿ ಗಂಡಸ್ತನದ ಪ್ರಶ್ನೆಯೇ ಇಲ್ಲ. ಯಾವುದೇ ವಿಚಾರವನ್ನು ದಕ್ಷತೆಯಿಂದ ಎದುರಿಸಿದ್ದೇವೆ. ಎಚ್ ಡಿಕೆ ಮಾತಿಗೆ ನಾನು ಉತ್ತರ ನೀಡೋದಿಲ್ಲ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡೋದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more