Halal Row ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ ಎಂದ ಸಿಎಂ!

Halal Row ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ ಎಂದ ಸಿಎಂ!

Published : Mar 31, 2022, 05:14 PM ISTUpdated : Mar 31, 2022, 05:39 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಎಚ್ ಡಿಕೆ ವಾಗ್ದಾಳಿ

ಸಿಎಂಗೆ ಗಂಡಸ್ತನ ಇದ್ರೆ ಹಲಾಲ್, ವ್ಯಾಪಾರ ಸಂಘರ್ಷ ತಡೆಯಲಿ

ಎಚ್ ಡಿಕೆ ಮಾತಿಗೆ ಸಿಎಂ ತೀಕ್ಷ್ಣ ಪ್ರತಿಕ್ರಿಯೆ

ಬೆಂಗಳೂರು (ಮಾ  31): ರಾಜ್ಯದಲ್ಲಿ ತೀವ್ರವಾಗಿರುವ ಹಲಾಲ್ (Halal Row)ಹಾಗೂ ಮುಸ್ಲಿಮರ ಮಳಿಗೆಗಳಿಗೆ ನಿರ್ಬಂಧ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( HD Kumaraswamy) ಕೆಂಡಾಮಂಡಲವಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ ಅವರು, ಸಿಎಂಗೆ ಗಂಡಸ್ತನ ಇದ್ದರೆ ರಾಜ್ಯದಲ್ಲಿ ಈಗ ನಡೆಯುತ್ತಿರುವ ವಿವಾದಗಳನ್ನು ತಡೆಯಲಿ ಎಂದು ಸವಾಲ್ ಹಾಕಿದ್ದಾರೆ. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಬಸವರಾಜ ಬೊಮ್ಮಾಯಿ, "ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ. ಈ ವಿಚಾರವನ್ನು ದಕ್ಷತೆಯಿಂದ ಎದುರಿಸಲಿದ್ದೇವೆ' ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ (BJP) ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಈ ವಿಚಾರವನ್ನು ಇಲ್ಲಿಗೆ ನಿಲ್ಲಿಸಿ. ಸಿಎಂಗೆ ಗಂಡಸ್ತನ ಇದ್ದರೆ ಇದನ್ನು ತಡೆಯಲಿ. ನಾನು ಈ ಪದವನ್ನು ಬಳಸಬಾರದು. ಆದರೆ, ತಡೆಯಲಾರದೆ ಬಳಸಿದ್ದೇನೆ. ಹಲಾಲ್ ನಿಷೇಧಕ್ಕೆ ಕರಪತ್ರವನ್ನುಹಂಚಲಾಗುತ್ತಿದೆ. ಕೇಸರಿ ಬಟ್ಟೆಯನ್ನು ಧರಿಸಿಕೊಂಡು ಹಳ್ಳಿ ಹಳ್ಳಿಯಲ್ಲಿ ವಿಷಬೀಜ ಬಿತ್ತುತ್ತಿದ್ದೀರಿ. ಯಾವ ಸಂವಿಧಾನವನ್ನುಈ ಮೂಲಕ ಗೌರವಿಸಲಿ ಹೊರಟಿದ್ದೀರಿ ಎಂದು ಎಚ್ ಡಿಕೆ ಪ್ರಶ್ನೆ ಮಾಡಿದ್ದಾರೆ.

Karnataka Politics ಕುಮಾರಸ್ವಾಮಿ ಗಂಡಸ್ತನ ಮಾತಿಗೆ ಸಿಡಿದೆದ್ದ ಬಿಜೆಪಿ ನಾಯಕರು

ಎಚ್ ಡಿಕೆ ಅವರ ಗಂಡಸ್ತನ ಸವಾಲಿಗೆ ಉತ್ತರ ಕೊಡೋದಿಲ್ಲ. ಇದರಲ್ಲಿ ಗಂಡಸ್ತನದ ಪ್ರಶ್ನೆಯೇ ಇಲ್ಲ. ಯಾವುದೇ ವಿಚಾರವನ್ನು ದಕ್ಷತೆಯಿಂದ ಎದುರಿಸಿದ್ದೇವೆ. ಎಚ್ ಡಿಕೆ ಮಾತಿಗೆ ನಾನು ಉತ್ತರ ನೀಡೋದಿಲ್ಲ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡೋದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more