Halal Row ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ ಎಂದ ಸಿಎಂ!

Halal Row ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ ಎಂದ ಸಿಎಂ!

Published : Mar 31, 2022, 05:14 PM ISTUpdated : Mar 31, 2022, 05:39 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಎಚ್ ಡಿಕೆ ವಾಗ್ದಾಳಿ

ಸಿಎಂಗೆ ಗಂಡಸ್ತನ ಇದ್ರೆ ಹಲಾಲ್, ವ್ಯಾಪಾರ ಸಂಘರ್ಷ ತಡೆಯಲಿ

ಎಚ್ ಡಿಕೆ ಮಾತಿಗೆ ಸಿಎಂ ತೀಕ್ಷ್ಣ ಪ್ರತಿಕ್ರಿಯೆ

ಬೆಂಗಳೂರು (ಮಾ  31): ರಾಜ್ಯದಲ್ಲಿ ತೀವ್ರವಾಗಿರುವ ಹಲಾಲ್ (Halal Row)ಹಾಗೂ ಮುಸ್ಲಿಮರ ಮಳಿಗೆಗಳಿಗೆ ನಿರ್ಬಂಧ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( HD Kumaraswamy) ಕೆಂಡಾಮಂಡಲವಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ ಅವರು, ಸಿಎಂಗೆ ಗಂಡಸ್ತನ ಇದ್ದರೆ ರಾಜ್ಯದಲ್ಲಿ ಈಗ ನಡೆಯುತ್ತಿರುವ ವಿವಾದಗಳನ್ನು ತಡೆಯಲಿ ಎಂದು ಸವಾಲ್ ಹಾಕಿದ್ದಾರೆ. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಬಸವರಾಜ ಬೊಮ್ಮಾಯಿ, "ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ. ಈ ವಿಚಾರವನ್ನು ದಕ್ಷತೆಯಿಂದ ಎದುರಿಸಲಿದ್ದೇವೆ' ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ (BJP) ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಈ ವಿಚಾರವನ್ನು ಇಲ್ಲಿಗೆ ನಿಲ್ಲಿಸಿ. ಸಿಎಂಗೆ ಗಂಡಸ್ತನ ಇದ್ದರೆ ಇದನ್ನು ತಡೆಯಲಿ. ನಾನು ಈ ಪದವನ್ನು ಬಳಸಬಾರದು. ಆದರೆ, ತಡೆಯಲಾರದೆ ಬಳಸಿದ್ದೇನೆ. ಹಲಾಲ್ ನಿಷೇಧಕ್ಕೆ ಕರಪತ್ರವನ್ನುಹಂಚಲಾಗುತ್ತಿದೆ. ಕೇಸರಿ ಬಟ್ಟೆಯನ್ನು ಧರಿಸಿಕೊಂಡು ಹಳ್ಳಿ ಹಳ್ಳಿಯಲ್ಲಿ ವಿಷಬೀಜ ಬಿತ್ತುತ್ತಿದ್ದೀರಿ. ಯಾವ ಸಂವಿಧಾನವನ್ನುಈ ಮೂಲಕ ಗೌರವಿಸಲಿ ಹೊರಟಿದ್ದೀರಿ ಎಂದು ಎಚ್ ಡಿಕೆ ಪ್ರಶ್ನೆ ಮಾಡಿದ್ದಾರೆ.

Karnataka Politics ಕುಮಾರಸ್ವಾಮಿ ಗಂಡಸ್ತನ ಮಾತಿಗೆ ಸಿಡಿದೆದ್ದ ಬಿಜೆಪಿ ನಾಯಕರು

ಎಚ್ ಡಿಕೆ ಅವರ ಗಂಡಸ್ತನ ಸವಾಲಿಗೆ ಉತ್ತರ ಕೊಡೋದಿಲ್ಲ. ಇದರಲ್ಲಿ ಗಂಡಸ್ತನದ ಪ್ರಶ್ನೆಯೇ ಇಲ್ಲ. ಯಾವುದೇ ವಿಚಾರವನ್ನು ದಕ್ಷತೆಯಿಂದ ಎದುರಿಸಿದ್ದೇವೆ. ಎಚ್ ಡಿಕೆ ಮಾತಿಗೆ ನಾನು ಉತ್ತರ ನೀಡೋದಿಲ್ಲ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡೋದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more