ಪೌರತ್ವ ಕಾಯ್ದೆಯಿಂದ ಮುಸ್ಲಿಮರಿಗೆ ಸಮಸ್ಯೆ ಇಲ್ಲ: ಕುರಾನ್ ಮೇಲೆ ಆಣೆ ಎಂದ ಬಿಜೆಪಿ ನಾಯಕ

Dec 21, 2019, 6:28 PM IST

 ಚಿಕ್ಕಮಗಳೂರು, [ಡಿ.21]:ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಆದ್ರೆ, ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗುತ್ತಿದ್ದು,  ದೇಶದ ಹಲವು ಕಡೆ ಪ್ರತಿಭಟನೆಗಳ ಕಿಚ್ಚು ಹೆಚ್ಚಾಗಿವೆ. ಅದರಲ್ಲೂ ಮುಸ್ಲಿಂ ಸಮುದಾಯದವರು ಹೆಚ್ಚಿನ ರೀತಿಯಲ್ಲಿ ವಿರೋಧಿಸುತ್ತಿದ್ದಾರೆ. ಇನ್ನು  ಕರ್ನಾಟಕದ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ಸಮಸ್ಯೆ ಇಲ್ಲ ಎನ್ನುವ ಅರಿವು ಮೂಡಿಸುವ ಕೆಲಸಗಳು ಸಹ ರಾಜ್ಯ ಸರ್ಕಾರದಿಂದ ನಡೆಯುತ್ತಿವೆ. ಇನ್ನು ಈ ಬಗ್ಗೆ ಬಿಜೆಪಿ ನಾಯಕ ಕ ಕುರಾನ್ ಮೇಲೆ ಆಣೆ ಮಾಡಿ ಮುಸ್ಲಿಂ ಜನರಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಹಾಗಾದ್ರೆ ಯಾರು ಆ ಬಿಜೆಪಿ ನಾಯಕ..? ಜಗ್ಗೇಶ್ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.