ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ: ಸಿಎಂ ಬೊಮ್ಮಾಯಿ

Oct 7, 2021, 1:30 PM IST

ಮೈಸೂರು(ಅ.07):  ಐಟಿ ದಾಳಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ, ಮಾಹಿತಿ ಪಡೆದ ಮೇಲೆ ಮಾತನಾಡುತ್ತೇನೆ ಅಂತ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 50 ಕ್ಕೂ ಹೆಚ್ಚು ಕಡೆ ಹಾಗೂ ಬಾಗಲಕೋಟೆಯಲ್ಲೂ ಇಂದು ಬೆಳ್ಳಂಬೆಳಿಗ್ಗೆ ಐಟಿ ದಾಳಿ ನಡೆಸಲಾಗಿದೆ. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನವರ ಆಪ್ತ ಉಮೇಶ್‌ ಅವರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ ಮಾಡಲಾಗಿದೆ. 

ಬಿಎಸ್‌ವೈ ಆಪ್ತರ ಮೇಲಿನ ಐಟಿ ರೈಡ್ : ಆಂತರಿಕ ಕಾರಣ ಎಂದ ಎಚ್‌ಡಿಕೆ