ತಾಳಿ ಅಡವಿಟ್ಟು ಅಂತ್ಯಸಂಸ್ಕಾರ: ನೆರವಿನ ಭರವಸೆ ನೀಡಿದ ಸಿಎಂ

ತಾಳಿ ಅಡವಿಟ್ಟು ಅಂತ್ಯಸಂಸ್ಕಾರ: ನೆರವಿನ ಭರವಸೆ ನೀಡಿದ ಸಿಎಂ

Suvarna News   | Asianet News
Published : Jun 01, 2020, 01:47 PM IST

ದಗ ಜಿಲ್ಲೆಯ ನರಗುಂದ ತಾಲೂಕಿನ ಕಣ್ಣೂರಿನಲ್ಲಿ ಫಕೀರಪ್ಪ 108 ಆಂಬ್ಯಲೆನ್ಸ್ ಡ್ರೈವರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಫಕೀರಪ್ಪ ಕರ್ತವ್ಯಕ್ಕೆ ಹಾಜರಾಗಿ ಒಂದುಯಾಗುವಷ್ಟರಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಮಾಹಿತಿ ತಿಳಿದ ಪತ್ನಿ ಜ್ಯೋತಿ, ಫಕೀರಪ್ಪ ಅವರನ್ನು ರಾಮದುರ್ಗಕ್ಕೆ ಕೊಂಡ್ಯೊಯ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಫಕೀರಪ್ಪ ಕೊನೆಯುಸಿರೆಳೆದಿದ್ದರು. 

ಗದಗ(ಜೂ.01): 108 ಆಂಬ್ಯುಲೆನ್ಸ್ ಚಲಾಯಿಸುತ್ತಿದ್ದಾಗ ಹೃದಾಯಾಘಾತದಿಂದ ಮೃತಪಟ್ಟ ಫಕೀರಪ್ಪನ ಪತ್ನಿ ತನ್ನ ಮಾಂಗಲ್ಯ ಸರ ಅಡವಿಟ್ಟು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಕ್ತ ನೆರವಿನ ಭರವಸೆ ನೀಡಿದ್ದಾರೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಕಣ್ಣೂರಿನಲ್ಲಿ ಫಕೀರಪ್ಪ 108 ಆಂಬ್ಯಲೆನ್ಸ್ ಡ್ರೈವರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಫಕೀರಪ್ಪ ಕರ್ತವ್ಯಕ್ಕೆ ಹಾಜರಾಗಿ ಒಂದುಯಾಗುವಷ್ಟರಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಮಾಹಿತಿ ತಿಳಿದ ಪತ್ನಿ ಜ್ಯೋತಿ, ಫಕೀರಪ್ಪ ಅವರನ್ನು ರಾಮದುರ್ಗಕ್ಕೆ ಕೊಂಡ್ಯೊಯ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಫಕೀರಪ್ಪ ಕೊನೆಯುಸಿರೆಳೆದಿದ್ದರು. 

ಆರ್ಥಿಕ ಸಂಕಷ್ಟದಿಂದಾಗಿ ತಾಳಿ ಅಡವಿಟ್ಟು ಅಂತ್ಯ ಸಂಸ್ಕಾರ ಮಾಡಿದ ವಿಚಾರ ಮಾಧ್ಯಮದವರಿಂದ ತಿಳಿಯುತ್ತಿದ್ದಂತೆ ಫಕೀರಪ್ಪ ಪತ್ನಿಗೆ ಕರೆಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈಗಾಗಲೇ ಜಿಲ್ಲಾಧಿಕಾರಿಯವರ ಬಳಿ ಮಾತನಾಡಿದ್ದೇನೆ. ನೀವು ಸಮಾಧಾನವಾಗಿರಿ. ಸರ್ಕಾರದ ವತಿಯಿಂದ ಏನು ಮಾಡಲು ಸಾಧ್ಯವೋ ಅದನ್ನೆಲ್ಲವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!