ತಾಳಿ ಅಡವಿಟ್ಟು ಅಂತ್ಯಸಂಸ್ಕಾರ: ನೆರವಿನ ಭರವಸೆ ನೀಡಿದ ಸಿಎಂ

ತಾಳಿ ಅಡವಿಟ್ಟು ಅಂತ್ಯಸಂಸ್ಕಾರ: ನೆರವಿನ ಭರವಸೆ ನೀಡಿದ ಸಿಎಂ

Suvarna News   | Asianet News
Published : Jun 01, 2020, 01:47 PM IST

ದಗ ಜಿಲ್ಲೆಯ ನರಗುಂದ ತಾಲೂಕಿನ ಕಣ್ಣೂರಿನಲ್ಲಿ ಫಕೀರಪ್ಪ 108 ಆಂಬ್ಯಲೆನ್ಸ್ ಡ್ರೈವರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಫಕೀರಪ್ಪ ಕರ್ತವ್ಯಕ್ಕೆ ಹಾಜರಾಗಿ ಒಂದುಯಾಗುವಷ್ಟರಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಮಾಹಿತಿ ತಿಳಿದ ಪತ್ನಿ ಜ್ಯೋತಿ, ಫಕೀರಪ್ಪ ಅವರನ್ನು ರಾಮದುರ್ಗಕ್ಕೆ ಕೊಂಡ್ಯೊಯ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಫಕೀರಪ್ಪ ಕೊನೆಯುಸಿರೆಳೆದಿದ್ದರು. 

ಗದಗ(ಜೂ.01): 108 ಆಂಬ್ಯುಲೆನ್ಸ್ ಚಲಾಯಿಸುತ್ತಿದ್ದಾಗ ಹೃದಾಯಾಘಾತದಿಂದ ಮೃತಪಟ್ಟ ಫಕೀರಪ್ಪನ ಪತ್ನಿ ತನ್ನ ಮಾಂಗಲ್ಯ ಸರ ಅಡವಿಟ್ಟು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಕ್ತ ನೆರವಿನ ಭರವಸೆ ನೀಡಿದ್ದಾರೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಕಣ್ಣೂರಿನಲ್ಲಿ ಫಕೀರಪ್ಪ 108 ಆಂಬ್ಯಲೆನ್ಸ್ ಡ್ರೈವರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಫಕೀರಪ್ಪ ಕರ್ತವ್ಯಕ್ಕೆ ಹಾಜರಾಗಿ ಒಂದುಯಾಗುವಷ್ಟರಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಮಾಹಿತಿ ತಿಳಿದ ಪತ್ನಿ ಜ್ಯೋತಿ, ಫಕೀರಪ್ಪ ಅವರನ್ನು ರಾಮದುರ್ಗಕ್ಕೆ ಕೊಂಡ್ಯೊಯ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಫಕೀರಪ್ಪ ಕೊನೆಯುಸಿರೆಳೆದಿದ್ದರು. 

ಆರ್ಥಿಕ ಸಂಕಷ್ಟದಿಂದಾಗಿ ತಾಳಿ ಅಡವಿಟ್ಟು ಅಂತ್ಯ ಸಂಸ್ಕಾರ ಮಾಡಿದ ವಿಚಾರ ಮಾಧ್ಯಮದವರಿಂದ ತಿಳಿಯುತ್ತಿದ್ದಂತೆ ಫಕೀರಪ್ಪ ಪತ್ನಿಗೆ ಕರೆಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈಗಾಗಲೇ ಜಿಲ್ಲಾಧಿಕಾರಿಯವರ ಬಳಿ ಮಾತನಾಡಿದ್ದೇನೆ. ನೀವು ಸಮಾಧಾನವಾಗಿರಿ. ಸರ್ಕಾರದ ವತಿಯಿಂದ ಏನು ಮಾಡಲು ಸಾಧ್ಯವೋ ಅದನ್ನೆಲ್ಲವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?